9
ಉಪ್ಪಿನಂಗಡಿ: ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಆಟೋ ರಿಕ್ಷಾಗೆ ಕಾರೊಂದು ಹಿಂದಿನಿಂದ ಅಪ್ಪಳಿಸಿದ ಪರಿಣಾಮ ರಿಕ್ಷಾದಲ್ಲಿದ್ದ ಇಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಮೀಪದ ನೆಕ್ಕಿಲಾಡಿಯಲ್ಲಿ ನಡೆದಿದೆ.

ಆಟೋ ರಿಕ್ಷಾ ಮತ್ತು ಕಾರು ಅಪಘಾತದ ತೀವ್ರತೆಯಿಂದ ಸಂಪೂರ್ಣ ನಜ್ಜುಗುಜ್ಜಾಗಿದೆ. ಗಾಯಾಳು ಮಕ್ಕಳನ್ನು ಕೂಡಲೇ ಮಂಗಳೂರಿನ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಘಟನೆಗೆ ಕಾರಣವೇನೆಂದು ಇನ್ನೂ ತಿಳಿದು ಬಂದಿಲ್ಲ. ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದು, ತನಿಖೆಯ ನಂತರ ಹೆಚ್ಚಿನ ಮಾಹಿತಿ ಸಿಗಲಿದೆ.
