Home Business D K Suresh: ಹೆಚ್ಚಳವಾಗುತ್ತಾ ಹಾಲಿನ ದರ? ಡಿಕೆ ಸುರೇಶ್‌ ಹೇಳಿದ್ದೇನು?

D K Suresh: ಹೆಚ್ಚಳವಾಗುತ್ತಾ ಹಾಲಿನ ದರ? ಡಿಕೆ ಸುರೇಶ್‌ ಹೇಳಿದ್ದೇನು?

Hindu neighbor gifts plot of land

Hindu neighbour gifts land to Muslim journalist

D K Suresh: ಹಾಲು ಮಾರಾಟದಿಂದಾಗುತ್ತಿರುವ ನಷ್ಟದ ಕುರಿತು ಕೆಎಂಎಫ್‌ಗೆ ಮನವಿ ಮಾಡಲಾಗಿದ್ದು, ಹಾಲಿನ ದರ ಏರಿಕೆಗೆ ಯಾವುದೇ ಪ್ರಸ್ತಾವನೆ ಸಲ್ಲಿಸಿಲ್ಲ ಎಂದು ಬಮೂಲ್‌ ಅಧ್ಯಕ್ಷ ಡಿ.ಕೆ.ಸುರೇಶ್‌ ಹೇಳಿದ್ದಾರೆ.

ಹಾಲಿನ ದರ ಏರಿಕೆಗೆ ಯಾವುದೇ ಪ್ರಸ್ತಾವನೆ ಸಲ್ಲಿಸಿಲ್ಲ. ಆದರೆ ಹಾಲು ಮಾರಾಟದಿಂದ ಬೆಂಗಳೂರು ಹಾಲು ಒಕ್ಕೂಟಕ್ಕಾಗುತ್ತಿರುವ ನಷ್ಟದ ಕುರಿತು ಹೇಳಿದ್ದೇವೆ. ಪ್ರತಿ ಲೀಟರ್‌ ಹಾಲಿಗೆ 20 ಪೈಸೆಯಿಂದ 1.20 ರೂ. ವರೆಗೆ ನಷ್ಟ ಆಗುತ್ತಿದೆ. ಬಮೂಲ್‌ನಲ್ಲಿ 5 ಪ್ರಕಾರದ ಹಾಲು ಮಾರಾಟವಾಗುತ್ತಿದೆ. ಒಂದೊಂದು ರೀತಿಯ ಹಾಲಿನಿಂದ ಒಂದೊಂದು ರೀತಿ ನಷ್ಟವಾಗುತ್ತಿದೆ. ಅರ್ಧ ಲೀ. ಹಾಲು ಮಾರಾಟದಿಂದ ಲಾಭವಾಗುತ್ತಿದ್ದರೆ, 1 ಲೀ.ಗಿಂತ ಹೆಚ್ಚಿನ ಪ್ರಮಾಣ ಹಾಲು ಮಾರಾಟದಿಂದ ನಷ್ಟವಾಗುತ್ತಿದೆ ಎಂದರು.

ಅರ್ಧ ಲೀ. ಹಾಲಿಗೆ 26 ರು.ಗಳಿದ್ದರೆ, 1 ಲೀ. ಹಾಲಿಗೆ 48 ರು.ಗಳಿವೆ. ಈ ಹಿಂದೆ 1 ಲೀ. ಹಾಲಿನ ದರ ಹೆಚ್ಚಳ ವೇಳೆ ನಮ್ಮ ಅಧಿಕಾರಿಗಳು ಸರಿಯಾಗಿ ಲೆಕ್ಕ ಹಾಕದೆ, ಸರ್ಕಾರಕ್ಕೆ ಸರಿಯಾದ ಮಾಹಿತಿ ನೀಡದ ಕಾರಣ ನಷ್ಟ ಉಂಟಾಗುವಂತಾಗಿದೆ. ಈ ಬಗ್ಗೆ ಕೆಎಂಎಫ್‌ ಗಮನಕ್ಕೆ ತಂದಿದ್ದು, ದರ ಹೆಚ್ಚಳ ಮಾಡಿ ಎಂದು ಪ್ರಸ್ತಾವನೆ ನೀಡಿಲ್ಲ ಎಂದು ಹೇಳಿದರು.