Home » Nirmala Sitraman : ಚಿನ್ನ- ಬೆಳ್ಳಿ ದರದ ಬಗ್ಗೆ ಗುಡ್ ನ್ಯೂಸ್ ಕೊಟ್ಟ ಸಚಿವೆ ನಿರ್ಮಲಾ ಸೀತಾರಾಮನ್

Nirmala Sitraman : ಚಿನ್ನ- ಬೆಳ್ಳಿ ದರದ ಬಗ್ಗೆ ಗುಡ್ ನ್ಯೂಸ್ ಕೊಟ್ಟ ಸಚಿವೆ ನಿರ್ಮಲಾ ಸೀತಾರಾಮನ್

0 comments

Hindu neighbor gifts plot of land

Hindu neighbour gifts land to Muslim journalist

Nirmala Sitaraman : ತಟಸ್ಥವಾಗಿದ್ದ ಚಿನ್ನ ಬೆಳ್ಳಿ ದರಗಳು 2025ರ ಅಂತ್ಯದ ವೇಳೆಗೆ ಗಣನೀಯವಾಗಿ ಏರಿಕೆಯನ್ನು ಕಂಡವು. ಇದು ಜನರ ಕೈ ಸುಡುವಂತೆ ಮಾಡಿದೆ. ಆದರೆ ಇದೀಗ ಸರ್ಕಾರ ಚಿನ್ನ ಮತ್ತು ಬೆಳ್ಳಿಯ ಬೆಲೆಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ. ದೇಶೀಯ ಮಾರುಕಟ್ಟೆಯಲ್ಲಿ ಇವುಗಳ ಹೆಚ್ಚಿನ ಬೇಡಿಕೆ ತಾತ್ಕಾಲಿಕವೆಂಬಂತೆ ತೋರುತ್ತಿದೆ. ಆತಂಕಪಡುವ ಅಗತ್ಯವಿಲ್ಲ’ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಹೇಳಿದ್ದಾರೆ.

ಆರ್​ಬಿಐನ 621ನೇ ಕೇಂದ್ರೀಯ ಮಂಡಳಿ ಸಭೆ ಬಳಿಕ ಆರ್​ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ ಜೊತೆ ಸುದ್ದಿಗೋಷ್ಠಿಯಲ್ಲಿ ಪಾಲ್ಗೊಂಡು ಮಾತನಾಡಿದ ನಿರ್ಮಲಾ ಸೀತಾರಾಮನ್ (Nirmala Sitharaman) ಅವರು ಮನೆಗಳಲ್ಲಿ ಜನರ ಅಚ್ಚುಮೆಚ್ಚಿನ ಹೂಡಿಕೆಯೆಂದರೆ ಚಿನ್ನ. ದೇಶೀಯ ಮಾರುಕಟ್ಟೆಯಲ್ಲಿ ಬೇಡಿಕೆ ಹೆಚ್ಚಾಗಿರುವುದು ತಾತ್ಕಾಲಿಕವೆಂಬಂತೆ ಕಾಣುತ್ತಿದೆ. ನಾವು ಅದನ್ನು ಗಮನಿಸುತ್ತಿದ್ದೇವೆ. ಅದು ಆತಂಕಕಾರಿ ಪರಿಸ್ಥಿತಿಯನ್ನು ತಲುಪಿಲ್ಲ’ ಎಂದರು.

ಅಲ್ಲದೆ ‘ನಮ್ಮ ಮಾರುಕಟ್ಟೆಗೆ ಬರುವ ಬಹುತೇಕ ಎಲ್ಲಾ ಚಿನ್ನ ಆಮದು ಮಾಡಿಕೊಂಡದ್ದು. ನಮ್ಮದು ಆಮದು ಅವಲಂಬಿತ ದೇಶ. ಈ ಬಗ್ಗೆ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ, ಆದರೆ ಅವು ಬೇಡಿಕೆಯನ್ನು ಪೂರೈಸಲು ಸಾಕಾಗುವುದಿಲ್ಲ. ಇಂದು ಹೆಚ್ಚಿನ ದೇಶಗಳು, ವಿಶೇಷವಾಗಿ ವಿವಿಧ ಬ್ಯಾಂಕ್‌ಗಳ ಕೇಂದ್ರೀಯ ಬ್ಯಾಂಕ್‌ಗಳು ಚಿನ್ನ ಮತ್ತು ಬೆಳ್ಳಿಯನ್ನು ಖರೀದಿಸುತ್ತಿವೆ. ಇದರಿಂದಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಲೆಗಳು ಏರಿಳಿತಗೊಳ್ಳುತ್ತಿವೆ’ ಎಂದರು.

ಇನ್ನೂ ನಿರ್ಮಲಾ ಸೀತಾರಾಮನ್ ಪ್ರಕಾರ, ಜಾಗತಿಕವಾಗಿ ವಿವಿಧ ಸೆಂಟ್ರಲ್ ಬ್ಯಾಂಕುಗಳು ಚಿನ್ನ, ಬೆಳ್ಳಿಯಂತಹ ಅಮೂಲ್ಯ ಲೋಹಗಳನ್ನು ಸಾಕಷ್ಟು ಪ್ರಮಾಣದಲ್ಲಿ ಖರೀದಿಸಿದ್ದರಿಂದ ಬೇಡಿಕೆ ಹೆಚ್ಚಾಗಿ ಬೆಲೆಯೂ ಯದ್ವಾತದ್ವಾ ಏರಿದೆ. ಭಾರತದ ಸೆಂಟ್ರಲ್ ಬ್ಯಾಂಕ್ ಆದ ಆರ್​ಬಿಐ ಕೂಡ ಚಿನ್ನದ ಖರೀದಿಯನ್ನು ನಿರಂತರವಾಗಿ ಹೆಚ್ಚಿಸುತ್ತಾ ಹೋಗಿತ್ತು. ಚಿನ್ನ ಮತ್ತು ಬೆಳ್ಳಿಯ ಆಮದು ಆತಂಕ ಪಡುವ ಮಟ್ಟದಲ್ಲಿ ಇಲ್ಲವಂತೆ. ಅದರ ಬಗ್ಗೆ ಆರ್​ಬಿಐ ನಿಗಾ ವಹಿಸಿದೆ ಎಂದು ಅವರು ಹೇಳಿದ್ದಾರೆ.

banner

You may also like