” ನಿಮ್ಮಿಂದಲೇ ನಮ್ಮ ಮಳಲಿ ದೇವಸ್ಥಾನಕ್ಕೆ ಮರಳು ಹೊರಿಸ್ತೇವೆ” | SDPI ರಾಜ್ಯಾಧ್ಯಕ್ಷ ನ ನಿನ್ನೆಯ ಹೇಳಿಕೆಗೆ ಬಿಜೆಪಿ ನಾಯಕ ಯಶ್ ಪಾಲ್ ಸುವರ್ಣ ಎಚ್ಚರಿಕೆ
ಉಡುಪಿಯ ಮಳಲಿ ಜುಮ್ಮಾ ಮಸೀದಿಯಲ್ಲಿ ಹಿಂದೂ ದೇವರ ಕುರುಹು ಪತ್ತೆ ವಿಚಾರಕ್ಕೆ ಸಂಬಂಧಿಸಿದಂತೆ SDPI ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಹೇಳಿಕೆಯೊಂದನ್ನು ನೀಡಿದ್ದು ಅದಕ್ಕೆ ಪ್ರತಿಯಾಗಿ ಈಗ ಸ್ಥಳೀಯ ಬಿಜೆಪಿ ಮುಖಂಡ ಪ್ರತಿ ಹೇಳಿಕೆ ನೀಡಿದ್ದಾರೆ. ಮಳಲಿ ಜಗಳ ಮರಳು ಹೊರಿಸುವಲ್ಲಿಗೆ ಬಂದು ತಲುಪಿದೆ. “ಮಳಲಿ ಮಸೀದಿಯ ಒಂದು ಹಿಡಿ ಮರಳು ಕೊಡಲಾರೆವು. ಮಸೀದಿ ಬಿಟ್ಟು ಕೊಡುತ್ತಾರೆ ಅನ್ನೋ ಕನಸು ಕಾಣಬೇಡಿ. ಈ ದೇಶ ನಮ್ಮದು, ಇದಕ್ಕಾಗಿ ರಕ್ತ ಹರಿಸಿದ್ದೇವೆ. ತಾಂಬೂಲ ಪ್ರಶ್ನೆ ಎಂದು ಬರುವವರನ್ನು ಪೊಲೀಸರು ಒದ್ದು …