HomeBreaking Entertainment News Kannadaಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಮೇಲೆ ಚಪ್ಪಲಿ ಎಸೆತ | ಮಾತಾಡಿ ಶಿವಣ್ಣ ಎಂದು ಫ್ಯಾನ್ಸ್‌...

ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಮೇಲೆ ಚಪ್ಪಲಿ ಎಸೆತ | ಮಾತಾಡಿ ಶಿವಣ್ಣ ಎಂದು ಫ್ಯಾನ್ಸ್‌ ಆಗ್ರಹ

Hindu neighbor gifts plot of land

Hindu neighbour gifts land to Muslim journalist

ಚಿತ್ರರಂಗವು ತನ್ನದೇ ಆದ ವಿಭಿನ್ನ ಶೈಲಿಯಲ್ಲಿ ಯಶಸ್ವಿ ಕಾಣಲು ಪ್ರಯತ್ನಿಸುತ್ತಲೇ ಇದೆ. ಜನರು ಕೂಡ ವಿಭಿನ್ನ ಸಿನಿಮಾಗಳಿಗೆ ಮಾರು ಹೋಗದೆ ಇರಲ್ಲ. ಅಲ್ಲದೆ ಚಿತ್ರರಂಗದ ಹವಾ ಇತ್ತೀಚಿಗೆ ಜೋರಾಗಿದೆ. ನಾಯಕ ನಾಯಕಿಯರು ಚಿತ್ರರಂಗದಲ್ಲಿ ಅದ್ಭುತ ಸಾಧನೆ ಮಾಡುವುದು ಈಗಾಗಲೇ ನಾವು ನೋಡಿರಬಹುದು.

ಆದರೆ ಸಿನಿಮಾ ರಂಗದಲ್ಲಿ ಕೆಲವೊಮ್ಮೆ ಸೋಲು ಗೆಲುವು ಅನಿವಾರ್ಯ. ಆದರೆ ಇಲ್ಲಿ ಅಭಿಮಾನಿಗಳಿಗೆ ಪೈಪೋಟಿ ಶುರುವಾಗಿದೆ. ಹೌದು ಸದ್ಯ ಈಗಾಗಲೇ ಬಳ್ಳಾರಿಯ ಹೊಸಪೇಟೆಯಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ವಿ ಹರಿಕೃಷ್ಣ ಕಾಂಬಿನೇಶನ್‌ನ ಕ್ರಾಂತಿ ಚಿತ್ರದ ಎರಡನೇ ಹಾಡು ಬಿಡುಗಡೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಇನ್ನು ಈ ಸಲುವಾಗಿ ಸಿನಿಮಾದ ಸಂಪೂರ್ಣ ತಂಡ ಹೊಸಪೇಟೆಗೆ ಆಗಮಿಸಿತ್ತು.

ಕ್ರಾಂತಿ ಚಿತ್ರದ ಎರಡನೇ ಹಾಡು ಬಿಡುಗಡೆ ಕಾರ್ಯಕ್ರಮಎರಡು ಮೂರು ದಿನಗಳು ಬಾಕಿ ಇದೆ ಎನ್ನುವಾಗಲೇ ದರ್ಶನ್ ಅಭಿಮಾನಿಗಳು ಹಾಗೂ ಪುನೀತ್ ರಾಜ್‌ಕುಮಾರ್ ಅಭಿಮಾನಿಗಳ ನಡುವೆ ಫ್ಯಾನ್ ವಾರ್ ಶುರುವಾಗಿತ್ತು.

ಹಾಡು ಬಿಡುಗಡೆಯಾಗಲಿದ್ದ ವಾಲ್ಮೀಕಿ ವೃತ್ತದಲ್ಲಿಯೇ ಪುನೀತ್ ರಾಜ್‌ಕುಮಾರ್ ಪ್ಯಾನ್ಸ್ ಗಳು ಅವರ ಬ್ಯಾನರ್ ಕಟ್ಟಿದ್ದ ವೇದಿಕೆ ಮೇಲೂ ಹತ್ತಿ ಪುನೀತ್ ಕಟ್ ಔಟ್ ಹಾಗೂ ಬ್ಯಾನರ್ ಹಿಡಿದು ಕುಣಿದಿದ್ದರು. ಹೀಗೆ ಪುನೀತ್ ರಾಜ್‌ಕುಮಾರ್ ಹಾಗೂ ದರ್ಶನ್ ಅಭಿಮಾನಿಗಳ ನಡುವಿನ ಫ್ಯಾನ್ ವಾರ್ ಮಿತಿಮೀರಿದ ಸಂದರ್ಭ ಏರ್ಪಟ್ಟಿತ್ತು.

ಆದರೆ ಪರಿಸ್ಥಿತಿ ಏನೇ ಇದ್ದರೂ ನಟ ದರ್ಶನ್ ಹೊಸಪೇಟೆಯಲ್ಲಿನ ಪುನೀತ್ ರಾಜ್‌ಕುಮಾರ್ ಫೋಟೋ ಗಳಿಗೆ ಮಾಲಾರ್ಪಣೆ ಮಾಡಿದ ನಂತರ ಪರಿಸ್ಥಿತಿ ತುಸು ತಣ್ಣಗಾಗಿತ್ತು ಹಾಗೂ ಕ್ರಾಂತಿ ಚಿತ್ರದ ಬೊಂಬೆ ಬೊಂಬೆ ಹಾಡು ಬಿಡುಗಡೆ ಕಾರ್ಯಕ್ರಮ ಕೂಡ ಯಾವುದೇ ಅಡ್ಡಿಯಿಲ್ಲದೇ ಆರಂಭಗೊಂಡಿತ್ತು.

ಕಾರ್ಯಕ್ರಮ ಎಲ್ಲವೂ ಸರಿಯಾದ ಬೆನ್ನಲ್ಲೆ ಕಿಡಿಗೇಡಿಯೊಬ್ಬ ವೇದಿಕೆ ಮೇಲಿದ್ದ ನಟ ದರ್ಶನ್ ಅವರ ಮೇಲೆ ಚಪ್ಪಲಿ ಎಸೆದೆದಿದ್ದಾನೆ. ಚಪ್ಪಲಿ ಎಸೆದ ನಂತರ ಪರಿಸ್ಥಿತಿ ಬೇರೆ ತರಹವೇ ಅರ್ಥ ಪಡೆದುಕೊಂಡಿದೆ.

ಪ್ರಸ್ತುತ ದರ್ಶನ್ ಮೇಲೆ ಚಪ್ಪಲಿ ಎಸೆದದ್ದು ಯಾರು ಎಂಬುದು ಇನ್ನೂ ಸಹ ಬಹಿರಂಗವಾಗಿಲ್ಲ. ಜನಸ್ತೋಮವಿದ್ದ ಕಾರಣ ಆತ ಯಾರು ಎಂಬುದನ್ನು ಪತ್ತೆಹಚ್ಚಲಾಗಿಲ್ಲ. ಸದ್ಯ ಈ ಘಟನೆ ದರ್ಶನ್ ಅಭಿಮಾನಿಗಳಲ್ಲಿ ಬೇಸರ ಹಾಗೂ ನೋವನ್ನು ಉಂಟು ಮಾಡಿದ್ದು, ಸುದ್ದಿ ಎಲ್ಲೆಡೆ ಹರಡಿದೆ.

ಈ ಘಟನೆ ನಂತರ ನಮ್ಮ ನಟನ ಮೇಲೆ ಚಪ್ಪಲಿ ಎಸೆದಿದ್ದೀರ ಇದಕ್ಕೆ ಪ್ರತೀಕಾರ ತೀರಿಸಿಕೊಳ್ಳದೇ ಸುಮ್ಮನೆ ಬಿಡುವುದಿಲ್ಲ ಎಂದು ಸಾಮಾಜಿಕ ಜಾಲತಾಣದಲ್ಲಿ ಟ್ವಿಟ್ ಮಾಡುವ ಮೂಲಕ ಚಾಲೆಂಜ್ ಹಾಕಿದ್ದಾರೆ.

ಸದ್ಯ ಸಾಮಾಜಿಕ ಜಾಲತಾಣದಲ್ಲಿ ದರ್ಶನ್ ಅವರ ಅಭಿಮಾನಿಗಳು ರಾಘವೇಂದ್ರ ರಾಜ್‌ಕುಮಾರ್ ಹಾಗೂ ಶಿವರಾಜ್‌ಕುಮಾರ್ ಅವರು ಮಾಡಿರುವ ಟ್ವೀಟ್‌ಗಳಿಗೆ ಕಾಮೆಂಟ್ ಮಾಡುತ್ತಿದ್ದು, ಹೊಸಪೇಟೆಯ ಕೃತ್ಯದ ಬಗ್ಗೆ ಹೇಳಿಕೆ ನೀಡಿ ಮೌನ ವಹಿಸಬೇಡಿ ಎಂದಿದ್ದಾರೆ. ಇನ್ನು ಬೇರೆ ವಿಷಯಗಳ ಬಗ್ಗೆ ಪೋಸ್ಟ್ ಮಾಡೋಕೆ ಆಗುತ್ತೆ, ದೊಡ್ಡ ವಿವಾದ ಉಂಟಾಗಿ ಪರಿಸ್ಥಿತಿ ಕೆಟ್ಟಮಟ್ಟಕ್ಕೆ ತಿರುಗುತ್ತಿರುವುದರ ಕುರಿತು ಒಂದು ಪೋಸ್ಟ್ ಹಾಕುವುದಕ್ಕೆ ಸಮಯ ಇಲ್ವ ಎಂದು ಶಿವ ರಾಜ್‌ಕುಮಾರ್ ಹಾಗೂ ರಾಘವೇಂದ್ರ ರಾಜ್‌ಕುಮಾರ್ ಟ್ವೀಟ್‌ಗೆ ದರ್ಶನ್ ಅಭಿಮಾನಿಗಳು ಆಕ್ರೋಶದಿಂದ ಕಾಮೆಂಟ್ ಹಾಕುತ್ತಿದ್ದಾರೆ.

ಈ ಕುರಿತಾಗಿ ಶಿವ ರಾಜ್‌ಕುಮಾರ್ ಅವರ ಬಳಿ ಕೆಲ ಪುನೀತ್ ರಾಜಕುಮಾರ್ ಅಭಿಮಾನಿಗಳು ದಯವಿಟ್ಟು ಇದರ ಕುರಿತು ಮಾತನಾಡಿ ಹಾಗೂ ತನಿಖೆ ನಡೆಸಿ ಸತ್ಯ ಏನೆಂಬುದನ್ನು ತಿಳಿಯುವಂತೆ ಮಾಡಿ ಎಂದು ಕಾಮೆಂಟ್ ಮಾಡಿದ್ದಾರೆ.

ಒಟ್ಟಿನಲ್ಲಿ ಒಂದೆಡೆ ಪುನೀತ್ ರಾಜ್ ಕುಮಾರ್ ಅಭಿಮಾನಿಗಳೇ ದರ್ಶನ್ ಮೇಲೆ ಚಪ್ಪಲಿ ಎಸೆದದ್ದು ಎಂದು ದರ್ಶನ್ ಅಭಿಮಾನಿಗಳು ಆರೋಪ ಮಾಡುತ್ತಿದ್ದರೆ, ಇನ್ನೊಂದೆಡೆ ಇದನ್ನು ಖಂಡಿತ ಪುನೀತ್ ರಾಜ್‌ಕುಮಾರ್ ಫ್ಯಾನ್ಸ್ ಅಭಿಮಾನಿಗಳು ಮಾಡಲು ಸಾಧ್ಯವಿಲ್ಲ, ಯಾರೋ ಸಮಯವನ್ನು ಸರಿಯಾಗಿ ಬಳಸಿಕೊಂಡು ತಂದಿಡುವ ಕೆಲಸ ಮಾಡಿದ್ದಾರೆ ಅಷ್ಟೇ ಎಂದು ಪುನೀತ್ ರಾಜ್ ಕುಮಾರ್ ಫ್ಯಾನ್ಸ್ ಗಳು ಮತ್ತು ದರ್ಶನ್ ಪ್ಯಾನ್ಸ್ ಗಳಿಗೆ ಸಾಮಾಜಿಕ ಜಾಲತಾಣದಲ್ಲಿ ವಾದ ವಾದ ವಿವಾದಗಳು ಮುಂದುವರಿಯುತ್ತಲೇ ಇದೆ .

RELATED ARTICLES

Most Popular

Recent Comments