Home Breaking Entertainment News Kannada Darshan: ‘ಡೆವಿಲ್’ ಚಿತ್ರದಿಂದ ಸ್ವಂತ ಅಕ್ಕನ ಮಗನಿಗೆ ಗೇಟ್ ಪಾಸ್ ಕೊಟ್ಟ ದರ್ಶನ್ – ನಿಜಕ್ಕೂ...

Darshan: ‘ಡೆವಿಲ್’ ಚಿತ್ರದಿಂದ ಸ್ವಂತ ಅಕ್ಕನ ಮಗನಿಗೆ ಗೇಟ್ ಪಾಸ್ ಕೊಟ್ಟ ದರ್ಶನ್ – ನಿಜಕ್ಕೂ ಅಚ್ಚರಿ ಮೂಡಿಸುತ್ತೆ ಕಾರಣ

Hindu neighbor gifts plot of land

Hindu neighbour gifts land to Muslim journalist

Darshan: ಜೈಲಿನಿಂದ ಬಿಡುಗಡೆಯಾದ ಬಳಿಕ ದರ್ಶನ್(Darshan) ಅವರು ಕೆಲವೊಂದು ಪೋಸ್ಟ್ಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಅಂತೆಯೇ ಇದೀಗ ದರ್ಶನ್ ಅವರು ತಮ್ಮ ಡೆವಿಲ್ ಚಿತ್ರಕ್ಕೆ ಸಂಬಂಧಿಸಿದಂತೆ ಪೋಸ್ಟ್ ಒಂದನ್ನು ಹಾಕಿದ್ದು ಇದರಲ್ಲಿ ತಮ್ಮ ಅಕ್ಕನ ಮಗನನ್ನು ಈ ಚಿತ್ರದಿಂದ ಹೊರಗಿಡಲಾಗುತ್ತದೆ ಎಂದು ಬರೆದುಕೊಂಡಿದ್ದಾರೆ.

ಹೌದು, ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲಿಗೆ ಹೋಗುವ ಮುನ್ನ ‘ಡೆವಿಲ್’ ಚಿತ್ರದ ಚಿತ್ರೀಕರಣದಲ್ಲಿ ದರ್ಶನ್ ತೊಡಗಿಕೊಂಡಿದ್ದರು. ಸುಮಾರು 9 ತಿಂಗಳ ಬಳಿಕ ಪುನಃ ಶೂಟಿಂಗ್ ಪ್ರಾರಂಭಿಸಲಿದ್ದಾರೆ. ಈ ಚಿತ್ರದಲ್ಲಿ ದರ್ಶನ್ ಅವರ ಅಕ್ಕನ ಮಗ ನಟಿಸಲಿದ್ದರು. ಆದರೆ ಅಭಿಮಾನಿ ಒಬ್ಬರು ದರ್ಶನ್ ಅಕ್ಕನ ಮಗನ ಕಾಲಿಗೆ ನಮಸ್ಕರಿಸಿದ ಹಿನ್ನೆಲೆಯಲ್ಲಿ ಈ ಕುರಿತಾಗಿ ಬಹಳ ನೊಂದಿರುವ ದರ್ಶನ್ ಅವರು ಈ ಒಂದು ಮಹತ್ವ ನಿರ್ಧಾರವನ್ನು ಕೈಗೊಂಡಿದ್ದಾರೆ. ಅಲ್ಲದೆ ಈ ಕುರಿತಾಗಿ ಇನ್ಸ್ಟಾಗ್ರಾಮ್ ಪೋಸ್ಟ್ ಕೂಡ ಮಾಡಿದ್ದಾರೆ

ದರ್ಶನ್ ಪೋಸ್ಟ್ ನಲ್ಲಿ ಏನಿದೆ?

ಎಲ್ಲಾ ನನ್ನ ಸೆಲೆಬ್ರಿಟಿಸ್ ಗಳಿಗೆ ಈ ಮೂಲಕ ತಿಳಿಸುವುದೇನೆಂದರೆ ನೀವು ನನ್ನ ಮತ್ತು ನಮ್ಮ ಕುಟುಂಬದ ಮೇಲಿಟ್ಟಿರುವ ಪ್ರೀತಿ ಅಭಿಮಾನಕ್ಕೆ ನಾವು ಸದಾ ಚಿರಋಣಿ. ಆದರೆ, ಈ ವೀಡಿಯೊದಲ್ಲಿ ನಮ್ಮ ಮೇಲಿರುವ ಅಭಿಮಾನದಿಂದ ಇನ್ನೂ ಏನು ಸಾಧನೆ ಮಾಡದಿರುವ ನನ್ನ ಅಕ್ಕನ ಮಗನಾದ ಚಂದುಗೆ ಅಭಿಮಾನಿಯೊಬ್ಬರು ಕಾಲಿಗೆ ಬೀಳುವುದನ್ನು ನೋಡಿ ನನ್ನ ಮನಸಿಗೆ ತುಂಬಾ ನೋವಾಗಿದೆ. ಅದರಿಂದ ಡೆವಿಲ್ ಚಿತ್ರದಲ್ಲಿ ವಿಶೇಷ ಪಾತ್ರದಲ್ಲಿ ನಟಿಸಬೇಕಿದ್ದ ಚಂದುನನ್ನು ಈ ಚಿತ್ರದಿಂದ ಹೊರಗಿಡಲಾಗಿದೆ. ಚಂದು ಅಥವಾ ನನ್ನ ಮಗ ವಿನೀಶ್​ಗೆ ನೀವು ಅಭಿಮಾನದಿಂದಲೋ ಅಥವಾ ಅವರೊಂದಿಗೆ ಚೆನ್ನಾಗಿ ಗುರುತಿಸಿಕೊಂಡರೆ ನನಗೆ ಹತ್ತಿರವಾಗಬಹುದು ಎಂದು ನೀವು ಭಾವಿಸಿದರೆ ಅದನ್ನು ನಿಮ್ಮ ಮನಸಿನಿಂದ ತೆಗೆದು ಹಾಕಿ. ನೀವು ಹೀಗೆ ಮಾಡುವುದು ನನಗೆ ಸ್ವಲ್ಪವೂ ಇಷ್ಟ ಆಗುವುದಿಲ್ಲ’ ಎಂದು ದರ್ಶನ್ ಅವರು ಖಡಕ್ ಸಂದೇಶ ನೀಡಿದ್ದಾರೆ.