Home Breaking Entertainment News Kannada ಪವರ್‌ಸ್ಟಾರ್ ಪುನೀತ್ ರಾಜ್ ಹೃದಯಾಘಾತದಿಂದ ನಿಧನ | ಬಾರದ ಲೋಕಕ್ಕೆ ತೆರಳಿದ ಅಭಿಮಾನಿಗಳ ಅಪ್ಪು

ಪವರ್‌ಸ್ಟಾರ್ ಪುನೀತ್ ರಾಜ್ ಹೃದಯಾಘಾತದಿಂದ ನಿಧನ | ಬಾರದ ಲೋಕಕ್ಕೆ ತೆರಳಿದ ಅಭಿಮಾನಿಗಳ ಅಪ್ಪು

Hindu neighbor gifts plot of land

Hindu neighbour gifts land to Muslim journalist

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹೃದಯಾಘಾತದಿಂದ ಆಸ್ಪತ್ರೆಯಲ್ಲಿ ನಿಧನರಾದರು.

ಪುನೀತ್ ಅವರ ಆರೋಗ್ಯದಲ್ಲಿ ಇದ್ದಕ್ಕಿದ್ದಂತೆ ಏರುಪೇರಾದ ಹಿನ್ನೆಲೆಯಲ್ಲಿ ಅವರನ್ನು ಖಾಸಗಿ ಆಸ್ಪತ್ರೆಯೊಂದಕ್ಕೆ ಚಿಕಿತ್ಸೆಗೆ ದಾಖಿಸಲಾಗಿತ್ತು.

ಜಿಮ್ ನಲ್ಲಿ ಕಸರತ್ತು ಮಾಡುವ ವೇಳೆಯಲ್ಲಿ ಆರೋಗ್ಯದಲ್ಲಿ ಸಮಸ್ಯೆ ಕಂಡುಬಂದಾಗ ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು.

ಅವರಿಗೆ ಇಸಿಜಿ ಸೇರಿದಂತೆ ಹಲವು ಪರೀಕ್ಷೆಗಳನ್ನು ಮಾಡಲಾಗಿದ್ದರೂ,ಅವರನ್ನು ಉಳಿಸಿಕೊಳ್ಳುವ ಪ್ರಯತ್ನ ಯಶಸ್ಸಾಗಲಿಲ್ಲ.

ಆಸ್ಪತ್ರೆಗೆ ಮುಖ್ಯಮಂತ್ರಿ ಸೇರಿದಂತೆ ಪ್ರಮುಖರು ಭೇಟಿ ನೀಡಿದ್ದಾರೆ.

ವರನಟ ಡಾ| ರಾಜ್ ಕುಮಾರ್ -ಪಾರ್ವತ್ತಮ್ಮ ಅವರ ಪುತ್ರನಾಗಿ ಪುನೀತ್ ಅವರು 1975ರ ಮಾರ್ಚ್ 17ರಂದು ಜನಿಸಿದರು.

ಬಾಲನಟನಾಗಿ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟ ಪುನೀತ್ ರಾಜ್ ಕುಮಾರ್ ಅವರು ಅಪ್ಪು ಚಿತ್ರದ ಮೂಲಕ ನಾಯಕನಟನಾಗಿದ್ದರು. ನಂತರ ಅಭಿ, ಆಕಾಶ್, ನಮ್ಮ ಬಸವ, ಜಾಕಿ, ಹುಡುಗರು, ರಾಜಕುಮಾರ ಮುಂತಾದ ಚಿತ್ರಗಳಲ್ಲಿ ಮಿಂಚಿದ್ದರು.

ಯುವರತ್ನ’ ಪುನೀತ್ ಅವರ ಬಿಡುಗಡೆಯಾದ ಕೊನೆಯ ಚಿತ್ರ, ಜೇಮ್ಸ್ ಚಿತ್ರದ ಶೂಟಿಂಗ್ ಮುಗಿದಿದ್ದು, ಬಿಡುಗಡೆಯ ಸನಿಹದಲ್ಲಿದೆ.

ಪುನೀತ್, ರಾಜ್ ಕುಮಾರ್ ಮತ್ತು ಪಾರ್ವತಮ್ಮ ರಾಜಕುಮಾರ್ ಮಗನಾಗಿ 17 ಮಾರ್ಚ್,1975 ರಂದು ಜನಿಸಿದರು. ಪೂರ್ವ ಹೆಸರು ಲೋಹಿತ್. ಇವರು ರಾಜಕುಮಾರ್ ದಂಪತಿಯ ಕಿರಿಯ ಮಗ. ನಟರಾದ ಶಿವರಾಜಕುಮಾರ್ ಮತ್ತು ರಾಘವೇಂದ್ರ ರಾಜಕುಮಾರ್ ಸಹೋದರರು. ಪುನೀತ್ ಆರು ವರ್ಷದವರಿದ್ದಾಗ, ಅವರ ಕುಟುಂಬ ಬೆಂಗಳೂರಿಗೆ ತೆರಳಿತು. ಅವರು ಹತ್ತು ವರ್ಷ ವಯಸ್ಸಿನ ತನಕ ಅವರ ತಂದೆ ಅವರನ್ನು ಮತ್ತು ಅವರ ಸಹೋದರಿ ಪೂರ್ಣಿಮಾರನ್ನು ಚಲನಚಿತ್ರದ ಸೆಟ್ಗೆ ಕರೆದುಕೊಂಡು ಹೋಗುತ್ತಿದ್ದರು. ಪುನೀತ್ ಡಿಸೆಂಬರ್ 1 ,1999 ರಂದು ಅಶ್ವಿನಿ ರೇವಂತ್ ರನ್ನು ವಿವಾಹವಾದರು. ಇವರಿಗೆ ಇಬ್ಬರು ಪುತ್ರಿಯರಿದ್ದಾರೆ, ದ್ರಿತಿ ಮತ್ತು ವಂದಿತಾ.

ಪುನೀತ್ 26 ಚಲನಚಿತ್ರಗಳಲ್ಲಿ ನಾಯಕ ನಟನಾಗಿ ನಟನೆ ಮಾಡಿದ್ದಾರೆ .ಬಾಲ್ಯದಲ್ಲಿ ತನ್ನ ತಂದೆ ರಾಜಕುಮಾರ್ ಅಭಿನಯದ ಚಿತ್ರಗಳಲ್ಲಿ ಬಾಲ್ಯ ನಟನಾಗಿ ವಸಂತ ಗೀತ (1980), ಭಾಗ್ಯದಾತ (1981), ಚಲಿಸುವ ಮೋಡಗಳು (1982), ಎರಡು ನಕ್ಷತ್ರಗಳು (1983) ಮತ್ತು ಬೆಟ್ಟದ ಹೂವು (1985) ಅವರು ನಟಿಸಿದ ಚಿತ್ರಗಳ ನಟನೆಗೆ ಮೆಚ್ಚುಗೆ ಪಡೆದರು.
ಅವರ ಬೆಟ್ಟದ ಹೂವು ಚಿತ್ರದ ರಾಮು ಪಾತ್ರದ ಬಾಲನಟನೆಗೆ ರಾಷ್ಟ್ರ ಚಲನಚಿತ್ರ ಪ್ರಶಸ್ತಿಗೆ ಪಾತ್ರರಾದರು. ಪುನೀತ್ ಮೊದಲ ಪ್ರಮುಖ ಪಾತ್ರದಲ್ಲಿ 2002 ಅಪ್ಪು ರಲ್ಲಿ ಅಭಿನಯಿಸಿದರು. ಅವರ ಅಭಿ (2003), ಆಕಾಶ್ (2005), ಅರಸು (2007), ಮಿಲನ (2007), ಜಾಕೀ (2010), ಹುಡುಗರು (2011), ಅಣ್ಣಾ ಬಾಂಡ್ (2012) ಮತ್ತು ಪವರ್ (2014) ಸೇರಿದಂತೆ ಇತರ ಯಶಸ್ವಿ ಚಲನಚಿತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

ಅವರು ಪ್ರಸಿದ್ಧ ಟಿವಿ ಪ್ರದರ್ಶನ ಕನ್ನಡದ ಕೋಟ್ಯಧಿಪತಿ, ಹೂ ವಾಂಟ್ಸ್ ಟು ಬಿ ಮಿಲಿಯನೇರ್ ಎಂಬ ಕನ್ನಡ ಆವೃತ್ತಿಯ ಟೆಲಿವಿಷನ್ ಶೋ ನಿರೂಪಣೆ ಮಾಡಿದ್ದಾರೆ.