HomeBreaking Entertainment News Kannadaಕಾರ್ ಮೇಲಿದ್ದ ಕರ್ನಾಟಕ ರತ್ನ ಪುನೀತ್ ರಾಜ್ ಕುಮಾರ್ ಫೋಟೋ ಕಿತ್ತೆಸೆದು ಅವಮಾನ !!| ಆಕ್ರೋಶಗೊಂಡ...

ಕಾರ್ ಮೇಲಿದ್ದ ಕರ್ನಾಟಕ ರತ್ನ ಪುನೀತ್ ರಾಜ್ ಕುಮಾರ್ ಫೋಟೋ ಕಿತ್ತೆಸೆದು ಅವಮಾನ !!| ಆಕ್ರೋಶಗೊಂಡ ಅಭಿಮಾನಿಗಳಿಂದ ತಿರುಪತಿ ತಿರುಮಲ ದೇವಸ್ಥಾನಕ್ಕೆ ಮುತ್ತಿಗೆ

Hindu neighbor gifts plot of land

Hindu neighbour gifts land to Muslim journalist

ಸುಪ್ರಸಿದ್ಧ ತಿರುಪತಿ ತಿರುಮಲ ದೇವಸ್ಥಾನಕ್ಕೆ ಹೋಗುವಾಗ ಕಾರಿನ ಮೇಲಿದ್ದ ಪುನೀತ್ ರಾಜ್ ಕುಮಾರ್ ಫೋಟೋ ಮತ್ತು ನಾಡಧ್ವಜವನ್ನು ತೆರುವುಗೊಳಿಸಿರುವ ಟಿಟಿಡಿ ನಡೆಗೆ ಕರ್ನಾಟಕ ರಾಜ್ಯ ಪುನೀತ್ ರಾಜ್ ಕುಮಾರ್ ಅಭಿಮಾನಿಗಳು ತೀವ್ರ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ಈ ಕುರಿತು ಸ್ಪಷ್ಟನೆಗಾಗಿ ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ತಿರುಪತಿ ತಿರುಮಲ ದೇವಸ್ಥಾನಕ್ಕೆ ಮುತ್ತಿಗೆ ಹಾಕಲು ನಿರ್ಧರಿಸಿದ್ದಾರೆ. ಕಾರಿನ ಮೇಲಿದ್ದ ಅಪ್ಪು ಫೋಟೋ ಮತ್ತು ನಾಡಧ್ವಜವನ್ನು ತೆಗೆಸುತ್ತಿರುವ ವೀಡಿಯೋ ಹಲವು ದಿನಗಳಿಂದ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿತ್ತು. ಇದಕ್ಕೆ ಸೋಷಿಯಲ್ ಮೀಡಿಯಾದಲ್ಲೇ ಪೋಸ್ಟ್ ಗಳ ಮೂಲಕ ಪ್ರತಿಭಟನೆ ದಾಖಲಿಸಲಾಗುತ್ತಿತ್ತು. ಆದರೆ ಇದೀಗ ದೇವಸ್ಥಾನಕ್ಕೆ ಮುತ್ತಿಗೆ ಹಾಕುವ ಮೂಲಕ ಪ್ರತಿಭಟನೆ ಮಾಡಲಾಗುತ್ತಿದೆ.

ಪುನೀತ್ ರಾಜ್ ಕುಮಾರ್ ಅವರನ್ನು ಅಭಿಮಾನಿಗಳು ದೇವರ ರೀತಿಯಲ್ಲೇ ಆರಾಧಿಸುತ್ತಿದ್ದಾರೆ. ಅವರು ಮಾಡಿದ ಪುಣ್ಯದ ಕೆಲಸಗಳು ದೇವರಿಗೆ ಮಾಡಿದ ಸೇವೆಯಷ್ಟೇ ಪವಿತ್ರವಾಗಿವೆ. ಹೀಗಿದ್ದಾಗಲೂ ಅವರ ಫೋಟೋವನ್ನು ತಗೆದರೆ ಮಾತ್ರ ದೇವಸ್ಥಾನಕ್ಕೆ ಹೋಗಬಹುದು ಎನ್ನುವ ನಡೆ ಸರಿಯಾದದ್ದಲ್ಲ. ಇದನ್ನು ಪ್ರಶ್ನಿಸಿ, ಸ್ಪಷ್ಟನೆಗಾಗಿ ಇಂದು ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಟಿಟಿಡಿ ದೇವಸ್ಥಾನಕ್ಕೆ ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಾರೆ.

RELATED ARTICLES

Most Popular

Recent Comments