2
ಮಲೆನಾಡು ಭಾಗದಲ್ಲಿ ಮತ್ತೆ ಕಾಡುಜೀವಿಗಳ ಹಾವಳಿ ಹೆಚ್ಚುತ್ತಿದ್ದು, ಈ ನಡುವೆ ಕಾಡುಕೋಣದ ದಾಳಿಯಿಂದ ಯುವಕನೊಬ್ಬ ಮೃತಪಟ್ಟಿರುವ ಘಟನೆ ಆತಂಕಕ್ಕೆ ಕಾರಣವಾಗಿದೆ. ಕಳಸ ತಾಲೂಕಿನ ಮೈದಾಡಿಯ ಯಮಗೊಂಡ ಎಸ್ಟೇಟ್ನಲ್ಲಿ ಈ ದಾರುಣ ಘಟನೆ ನಡೆದಿದೆ.


ಮೃತರನ್ನು ಚೇತನ್ (30) ಎಂದು ಗುರುತಿಸಲಾಗಿದೆ.
ಕಾಡುಕೋಣ ದಾಳಿ ವೇಳೆ ಅದರ ಕೊಂಬು ಚೇತನ್ ಅವರ ಎದೆಗೆ ತೀವ್ರವಾಗಿ ತಗುಲಿದ್ದು, ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣ ಅವರನ್ನು ಕಳಸ ಆಸ್ಪತ್ರೆ ಸೇರಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.
