Home » ಬಾಗಲಕೋಟೆ: ಕಲ್ಲು ತೂರಾಟ ಪ್ರಕರಣ ಆರುವ ಮೊದಲೇ ಮುಸ್ಲಿಂ ಯುವಕರಿಂದ ಪ್ರಚೋದನಕಾರಿ ಪೋಸ್ಟ್‌

ಬಾಗಲಕೋಟೆ: ಕಲ್ಲು ತೂರಾಟ ಪ್ರಕರಣ ಆರುವ ಮೊದಲೇ ಮುಸ್ಲಿಂ ಯುವಕರಿಂದ ಪ್ರಚೋದನಕಾರಿ ಪೋಸ್ಟ್‌

0 comments
Crime

ಬಾಗಲಕೋಟೆ: ನಗರದಲ್ಲಿ ಛತ್ರಪತಿ ಶಿವಾಜಿ ಭಾವಚಿತ್ರ ಮೆರವಣಿಗೆ ವೇಳೆ ನಡೆದ ಕಲ್ಲೆಸೆತ ಪ್ರಕರಣದ ಕಾವು ಆರುವ ಮುನ್ನವೇ ಸಾಮಾಜಿಕ ಜಾಲತಾಣದ ಪೋಸ್ಟ್‌ಗಳಿಂದ ಇನ್ನೊಂದು ವಿವಾದ ಸೃಷ್ಟಿಯಾಗಿದೆ. ಕೆಲವು ಮುಸ್ಲಿಂ ಯುವಕರು ಪಂಕಾ ಮಸೀದಿಯ ಭಾವಚಿತ್ರ ಹಾಗೂ ವಿಡಿಯೋ ಹಂಚಿಕೊಂಡು ಪ್ರಚೋದನಕಾರಿ ಪೋಸ್ಟ್‌ ಮಾಡಿರುವುದು ಕಂಡು ಬಂದಿದ್ದು, ʼ15 ನಿಮಿಷ ಪೊಲೀಸರು ಸುಮ್ಮನಿರಲಿ, ಇಸ್ಲಾಂ ಪವರ್‌ ತೋರಿಸುತ್ತೇವೆʼ ಎಂಬ ಅರ್ಥದ ಹೇಳಿಕೆಯನ್ನು ಪೋಸ್ಟ್‌ನಲ್ಲಿ ಬರೆದಿರುವುದು ಭಾರೀ ಚರ್ಚೆಗೆ ಕಾರಣವಾಗಿದೆ.

ಸದ್ಯ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಈ ಪೋಸ್ಟ್ ಬಗ್ಗೆ ಪೊಲೀಸರು ಗಮನ ಹರಿಸಿದ್ದು, ಕಾನೂನು ಕ್ರಮದ ಕುರಿತು ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ಪ್ರಚೋದನಕಾರಿ ಹೇಳಿಕೆಗಳು ಸಮಾಜದಲ್ಲಿ ಅಶಾಂತಿ ಉಂಟುಮಾಡುವ ಸಾಧ್ಯತೆ ಇರುವುದರಿಂದ, ಜವಾಬ್ದಾರಿಯುತವಾಗಿ ವರ್ತಿಸುವಂತೆ ಅಧಿಕಾರಿಗಳು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.

You may also like