ಬಂಟ್ವಾಳ: ಬಿಸಿರೋಡ್ನ ಕೆಎಸ್ಆರ್ಟಿಸಿ ನೂತನ ಬಸ್ ನಿಲ್ದಾಣದ ಬಳಿ ಗುರುವಾರ ಸಂಜೆ ಬಸ್ಗಾಗಿ ಕಾಯುತ್ತಿದ್ದ ಯುವತಿಯೊಬ್ಬಳ ಮೇಲೆ ಹರಿತವಾದ ಆಯುಧದಿಂದ ಯುವಕನೋರ್ವ ಮಾರಣಾಂತಿಕ ದಾಳಿ ಮಾಡಿ ಪರಾರಿಯಾಗಿದ್ದು, ದಾಳಿಯಿಂದ ತೀವ್ರವಾಗಿ ಗಾಯಗೊಂಡಿದ್ದ ಯುವತಿ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾಳೆ.

ಮೃತ ಯುವತಿಯನ್ನು ಕಕ್ಕೆಪದವು ನಿವಾಸಿ ಬಾಳಪ್ಪ ಗೌಡ ಅವರ ಪುತ್ರಿ ಲಾವಣ್ಯ ಎಂದು ಗುರುತಿಸಲಾಗಿದೆ.
ರಕ್ತದ ಮಡುವಿನಲ್ಲಿ ಬಿದ್ದಿದ್ದ ಯುವತಿಯನ್ನು ತಕ್ಷಣವೇ ಸ್ಥಳಿಯರು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದರಾದರೂ, ತೀವ್ರ ಗಾಯವಾಗಿದ್ದ ಆಕೆ ಮೃತಪಟ್ಟಿರುವುದಾಗಿ ವರದಿಯಾಗಿದೆ.
ಆರೋಪಿಯ ಬಂಧನಕ್ಕಾಗಿ ಪೊಲೀಸರು ಬಲೆ ಬೀಸಿದ್ದು, ಹೆಚ್ಚಿನ ವಿವರಗಳು ತನಿಖೆಯ ಬಳಿಕ ಹೊರಬರಬೇಕಿದೆ.

