Home » ಬಂಟ್ವಾಳ : ಬಸ್ ನಿಲ್ದಾಣದಲ್ಲಿ ಯುವತಿಯ ಭೀಕರ ಹತ್ಯೆ ಪ್ರಕರಣ: ಕೊಲೆ ಆರೋಪಿಯ ಗುರುತು ಪತ್ತೆ ಹಚ್ಚಿದ ಪೊಲೀಸರು

ಬಂಟ್ವಾಳ : ಬಸ್ ನಿಲ್ದಾಣದಲ್ಲಿ ಯುವತಿಯ ಭೀಕರ ಹತ್ಯೆ ಪ್ರಕರಣ: ಕೊಲೆ ಆರೋಪಿಯ ಗುರುತು ಪತ್ತೆ ಹಚ್ಚಿದ ಪೊಲೀಸರು

0 comments

ಬಂಟ್ವಾಳ:  ಬಿ. ಸಿ. ರೋಡ್ ಸರ್ಕಾರಿ ಬಸ್‌ ನಿಲ್ದಾಣದಲ್ಲಿ ಯುವತಿಯೊಬ್ಬಳ ಮೇಲೆ ಯುವಕನೋರ್ವ ಕತ್ತಿಯಿಂದ ಭೀಕರವಾಗಿ ದಾಳಿ ನಡೆಸಿ ಹತ್ಯೆ ಮಾಡಿ ಪರಾರಿಯಾಗಿರುವ ಆಘಾತಕಾರಿ ಘಟನೆ ಜು.16 ರಂದು ಸಂಜೆ ಸಂಭವಿಸಿದೆ. ಕೊಲೆ ಮಾಡಿದ ಯುವಕನ ಮಾಹಿತಿಯನ್ನು ಪೊಲೀಸರು ಪತ್ತೆ ಹಚ್ಚಿ ಬಂಧನಕ್ಕಾಗಿ ಹುಡುಕಾಟ ನಡೆಸುತ್ತಿದ್ದಾರೆ.

ಬಂಟ್ವಾಳ ತಾಲೂಕಿನ ಕಕ್ಕೆಪದವು ನಿವಾಸಿ ಬಾಲಕೃಷ್ಣ ಗೌಡ ಮಗಳು ಲಾವಣ್ಯ(25) ಸಾವನ್ನಪ್ಪಿದವಳು. ಬಿ. ಸಿ. ರೋಡ್ ಸರ್ಕಾರಿ ಬಸ್‌ ನಿಲ್ದಾಣದಲ್ಲಿ ಕಕ್ಕೆಪದವು ಮಾರ್ಗವಾಗಿ ಸಂಚಾರಿಸುವ ಸರ್ಕಾರಿ ಬಸ್ಸಿನೊಳಗೆ ಯುವತಿ ಕುಳಿತಿದ್ದಳು. ಈ ವೇಳೆ ಆಕೆಯನ್ನು ಹಿಂಬಾಲಿಸಿಕೊಂಡು ಬಂದ ಯುವಕ, ಬಸ್ಸಿನೊಳಗೆ ನುಗ್ಗಿ ಯುವತಿಯನ್ನು ಬಲವಂತವಾಗಿ ಕೆಳಗಿಳಿಸಿದ್ದಾನೆ. ಬಳಿಕ ಸಾರ್ವಜನಿಕರ ಸಮ್ಮುಖದಲ್ಲೇ ಕತ್ತಿಯಿಂದ ಆಕೆಯ ಮೇಲೆ ಭೀಕರವಾಗಿ ಹಲ್ಲೆ ನಡೆಸಿ, ಕೊಂದು ಸ್ಥಳದಿಂದ ಪರಾರಿಯಾಗಿದ್ದಾನೆ. 

*ಯುವತಿಯ ಮರಣಕ್ಕೆ ಸಂಬಂಧಿಸಿದಂತೆ ಸ್ಪಷ್ಟನೆ*

ಸದ್ರಿ ಯುವತಿಯನ್ನು ಆಸ್ಪತ್ರೆಗೆ ಕರೆತಂದಾಗ, ವೈದ್ಯರು ಪರೀಕ್ಷಿಸಿ ಯುವತಿಯು ಘಟನಾ ಸ್ಥಳದಲ್ಲೇ ಮೃತಪಟ್ಟಿರುವುದಾಗಿ ತಿಳಿಸಿರುತ್ತಾರೆ.

banner

You may also like