ಬೆಳ್ತಂಗಡಿ: ಶಿಬಾಜೆ ಶ್ರೀಧರ ಕೊಲೆ ಪ್ರಕರಣದ ಮರುತನಿಖೆ ಎಸ್ಐಟಿ ಅಧಿಕಾರಿಗಳು ನಡೆಸುತ್ತಿರುವ ಬೆನ್ನಲ್ಲೇ ದೂರುದಾರ ಫಾರ್ಮ್ಹೌಸ್ನಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ ಮಾಡಿರುವ ಕುರಿತು ವರದಿಯಾಗಿದೆ.

ಬೆಳ್ತಂಗಡಿ ತಾಲೂಕಿನ ಶಿಬಾಜೆ ಗ್ರಾಮದ ಸಾರಾ ಫಾರ್ಮ್ನಲ್ಲಿ 2022 ಡಿಸೆಂಬರ್ 18 ರಂದು ಶ್ರೀಧರ (30) ಕೊಲೆ ಪ್ರಕರಣದಲ್ಲಿ ದೂರುದಾರನಾಗಿರುವ ಹರೀಶ್ ಬಿ ಮುಗೇರ ಮಾ 11 ರಂದು ರಾತ್ರಿ 9.45 ಕ್ಕೆ ಶಿಬಾಜೆಯ ಸಾರಾ ಫಾರ್ಮ್ ತೋಟದಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ ಮಾಡಿದ್ದು, ಕೂಡಲೇ ಮಂಗಳೂರು ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.
ಮಾ.3 ರಂದು ಎಸ್ಐಟಿ ಅಧಿಕಾರಿಗಳು ವಿಚಾರಣೆಗಾಗಿ ನೋಟಿಸ್ ನೀಡಿ ಕರೆದು ನಂತರ ಶ್ರೀಧರ ಕೊಲೆ ಪ್ರಕರಣ ಕುರಿತು ವಿಚಾರಣೆ ನಡೆಸಿದ್ದರು. ಆತ್ಮಹತ್ಯೆಗೆ ಯಾವ ಕಾರಣ ಎಂದು ತಿಳಿದು ಬಂದಿಲ್ಲ.
