Home » ಬೆಳ್ತಂಗಡಿ: ಅನಾರೋಗ್ಯದ ಹಿನ್ನೆಲೆ, ವ್ಯಕ್ತಿ ಆತ್ಮಹತ್ಯೆ

ಬೆಳ್ತಂಗಡಿ: ಅನಾರೋಗ್ಯದ ಹಿನ್ನೆಲೆ, ವ್ಯಕ್ತಿ ಆತ್ಮಹತ್ಯೆ

0 comments

ಬೆಳ್ತಂಗಡಿ: ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ವೃದ್ಧರೊಬ್ಬರು ಮನೆಯ ಹೊರಗೆ ಅಳವಡಿಸಿದ್ದ ರಾಡ್‌ಗೆ ಹಗ್ಗದಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಧರ್ಮಸ್ಥಳದಲ್ಲಿ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ಜೋಡುಸ್ನಾನದ ಅಗುಳೆ ನಿವಾಸಿ ಐತಪ್ಪ ಪೂಜಾರಿ (68) ಎಂಬುವವರು ಮೇ 6 ರಂದು ರಾತ್ರಿ 11 ಗಂಟೆಯಿಂದ ಮೇ 7 ರ ಬೆಳಗ್ಗೆ 6 ಗಂಟೆ ಒಳಗಡೆ ಮನೆಯ ಹೊರಗೆ ಅಳವಡಿಸಿದ್ದ ರಾಡ್‌ಗೆ ನೈಲಾನ್‌ ಹಗ್ಗದಿಂದ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಐತಪ್ಪ ಪೂಜಾರಿಯವರ ಸೊಸೆ ಬೆಳಗ್ಗೆ 6 ಗಂಟೆಗೆ ಎದ್ದು ಮನೆಯ ಅಂಗಳಕ್ಕೆ ಬಂದಾಗ ಆತ್ಮಹತ್ಯೆ ಘಟನೆ ಬೆಳಕಿಗೆ ಬಂದಿದೆ ಎಂದು ಮೇ 7 ರಂದು ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಾಗಿರುವ ಕುರಿತು ವರದಿಯಾಗಿದೆ.

You may also like