Home » ಬೆಳ್ತಂಗಡಿ: ಪ್ರಚೋದನಕಾರಿ ಭಾಷಣ ಪ್ರಕರಣ: ಎಸ್‌ಡಿಪಿಐ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶೀ ರಿಯಾಜ್‌ಗೆ ಜೈಲು ಶಿಕ್ಷೆ ಪ್ರಕಟ

ಬೆಳ್ತಂಗಡಿ: ಪ್ರಚೋದನಕಾರಿ ಭಾಷಣ ಪ್ರಕರಣ: ಎಸ್‌ಡಿಪಿಐ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶೀ ರಿಯಾಜ್‌ಗೆ ಜೈಲು ಶಿಕ್ಷೆ ಪ್ರಕಟ

0 comments

ಬೆಳ್ತಂಗಡಿ, ಆ.5: ಸುಮಾರು 11 ವರ್ಷಗಳ ಹಳೆಯ ಪ್ರಚೋದನಕಾರಿ ಭಾಷಣಕ್ಕೆ ಕುರಿತಂತೆ ಸೋಶಿಯಲ್‌ ಡೆಮಾಕ್ರಟಿಕ್‌ ಪಾರ್ಟಿ ಆಫ್‌ ಇಂಡಿಯಾ (ಎಸ್‌ಡಿಪಿಐ) ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಿಯಾಜ್‌ ಪರಂಗಿಪೇಟೆಗೆ ನ್ಯಾಯಾಲಯವು ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ಆದೇಶ ನೀಡಿದೆ. ರಿಯಾಜ್‌ ಪರಂಗಿಪೇಟೆಗೆ ಆರು ತಿಂಗಳ ಸಾದಾ ಕಾರಾಗೃಹವಾಸದ ಶಿಕ್ಷೆ ಹಾಗೂ ರೂ.10000 ದಂಡ ವಿಧಿಸಲಾಗಿದೆ.

ಘಟನೆ ವಿವರ:
2015 ರ ಜುಲೈ 23 ರಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕು ಕಚೇರಿ ಬಳಿ ನಿಷೇಧಿತ ಪಿಎಫ್‌ಐ ಸಂಘಟನೆಯ ವತಿಯಿಂದ ಪ್ರತಿಭಟನೆ ಆಯೋಜನೆ ಮಾಡಲಾಗಿತ್ತು. ಈ ಸಭೆಯಲ್ಲಿ ಭಾಷಣ ಮಾಡಿದ್ದ ರಿಯಾಜ್‌ ಪರಂಗಿಪೇಟೆ ಧಾರ್ಮಿಕ ಭಾವನೆಗೆ ಧಕ್ಕೆ ಬರುವ ರೀತಿಯಲ್ಲಿ ಸಮಾಜದಲ್ಲಿ ಪ್ರಚೋದನೆ ಸೃಷ್ಟಿಯಲ್ಲಿ ಮಾತಗಳನ್ನಾಡಿದ್ದರು ಎನ್ನುವ ಆರೋಪವಿತ್ತು. ಈ ಕುರಿತು ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿತ್ತು.

ಪ್ರಕರಣದ ತನಿಖೆ ಮಾಡಿದ ಬೆಳ್ತಂಗಡಿ ಠಾಣೆಯ ಅಂದಿನ ಉಪನಿರೀಕ್ಷಕರು ಹಾಗೂ ತನಿಖಾಧಿಕಾರಿ ಪ್ರಕರಣಕ್ಕೆ ಕುರಿತಂತೆ ಅಗತ್ಯ ಸಾಕ್ಷ್ಯಾಧಾರಗಳನ್ನು ಕಲೆ ಹಾಕಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಪ್ರಕರಣದಲ್ಲಿ ಸರಕಾರಿ ಅಭಿಯೋಜಕಿ ಆಶೀತಾ ಅವರು ವಾದ ಮಂಡಿಸಿದ್ದರು. ವಿಚಾರಣೆ ಮಾಡಿದ ನ್ಯಾಯಾಲಯವು ಆರೋಪ ಸಾಬೀತಾಗಿದ್ದು, ಶಿಕ್ಷೆ ಪ್ರಕಟಿಸಿದೆ.

You may also like