Home » ಬೆಳ್ತಂಗಡಿ: ಅಪಹರಣ ಕಥೆಕಟ್ಟಿದ ಯವತಿ, ಅಷ್ಟಕ್ಕೂ ಕಾರಣವೇನು?

ಬೆಳ್ತಂಗಡಿ: ಅಪಹರಣ ಕಥೆಕಟ್ಟಿದ ಯವತಿ, ಅಷ್ಟಕ್ಕೂ ಕಾರಣವೇನು?

0 comments

ಮಂಗಳೂರು: ಬೆಳ್ತಂಗಡಿಯಲ್ಲಿ ನಿನ್ನೆ ನಡೆದ ಕಾಲೇಜು ವಿದ್ಯಾರ್ಥಿನಿ ಅಪಹರಣ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರ ತನಿಖೆಯಲ್ಲಿ ಮಹತ್ವದ ಮಾಹಿತಿ ಲಭ್ಯವಾಗಿರುವ ಕುರಿತು ವರದಿಯಾಗಿದೆ. ವಿದ್ಯಾರ್ಥಿನಿಯೇ ತನ್ನ ಕೈಗೆ ಬ್ಲೇಡ್‌ನಲ್ಲಿ ಗೀರಿ ಅಪಹರಣದ ಕಥೆ ಕಟ್ಟಿದ್ದಾಳೆಂದು ಪೊಲೀಸ್‌ ತನಿಖೆಯಲ್ಲಿ ತಿಳಿದು ಬಂದಿದೆ.

ಕಾರಿನ ನಂಬರ್‌ ಪ್ಲೇಟ್‌ಗೆ ಬಟ್ಟೆ ಕಟ್ಟಿದ್ದು, ಮುಖಕ್ಕೆ ಮುಸುಕು ಹಾಕಿದ್ದರು, ಮೂವರಿದ್ದರು, ಬೈಕ್‌ವೊಂದು ಹಿಂದಿನಿಂದ ಬಂದಿದ್ದಕ್ಕೆ ನನ್ನನ್ನು ಬಿಟ್ಟು ಎಸ್ಕೇಪ್‌ ಆಗಿದ್ದರು ಎನ್ನುವ ಕಥೆಯನ್ನು ಯುವತಿ ಪೊಲೀಸರಲ್ಲಿ ಹೇಳಿದ್ದಳು. ಇದರಂತೆ ಪೊಲೀಸರು ಘಟನೆ ನಡೆದಲ್ಲಿ ಸಿಸಿಟಿವಿ ದೃಶ್ಯಗಳನ್ನು ಪರಿಶೀಲನೆ ಮಾಡಿದ್ದು, ಯಾವುದೇ ಸಾಂದರ್ಭಿಕ ಸಾಕ್ಷಿ ದೊರಕಲಿಲ್ಲ. ಹಾಗಾಗಿ ವಿದ್ಯಾರ್ಥಿನಿಯಿಂದ ಹೆಚ್ಚಿನ ಮಾಹಿತಿ ಪಡೆಯಲು ಮುಂದಾಗಿದ್ದಾರೆ. ಕಾರಿನ ಬಣ್ಣ, ಕಾರು ಯಾವುದು? ಎಲ್ಲವನ್ನೂ ಕರೆಕ್ಟ್‌ ಆಗಿ ಹೇಳಲು ಹೇಳಿದಾಗ ಆಕೆ ತಬ್ಬಿಬ್ಬಾಗಿದ್ದಾಳೆ.

ನಂತರ ಅಪಹರಣ ಘಟನೆಯೇ ಸುಳ್ಳು ಎಂದು ಯುವತಿ ಹೇಳಿದ್ದು, ಬೇರೆ ಕಾಲೇಜು ಸೇರುವುದಕ್ಕೆ ಅಪಹರಣದ ಕತೆ ಕಟ್ಟಿದ್ದಾಗಿ ಹೇಳಿರುವುದಾಗಿ ವರದಿಯಾಗಿದೆ. ಗ್ರಾಮೀಣ ಭಾಗದ ಕಾಲೇಜು ಬದಲು ಮಂಗಳೂರು ನಗರದ ಕಾಲೇಜಿಗೆ ಹೋಗಲು ಬಯಸಿದ್ದು, ಅದಕ್ಕೆ ತಾನೇ ಬ್ಲೇಡ್‌ನಿಂದ ಕೈಯನ್ನು ಕೊಯ್ದಿರುವುದಾಗಿ ಹೇಳಿದ್ದಾಳೆ.

banner

ಮನೆಯ ಸಮೀಪವೇ ಪುಸ್ತಕಗಳನ್ನು ಸುಟ್ಟು ಹಾಕಿದ್ದು, ತನ್ನ ಬ್ಯಾಗನ್ನು ಅಪಹರಣ ಕಾರರು ಒಯ್ದಿದ್ದಾರ ಎಂದು ಕಥೆ ಕಟ್ಟಿದ್ದಾಳೆ. ಕೈ ಮೇಲಿನ ಗಾಯದಿಂದ ಅನುಮಾನಗೊಂಡ ಪೊಲೀಸರು ಕೂಲಕುಷ ವಿಚಾರಣೆ ನಡೆಸಿದಗ ಸತ್ಯ ಹೇಳಿದ್ದಾರೆ. ಇದರೊಂದಿಗೆ ಈ ಅಪಹರಣ ಪ್ರಕರಣ ಸುಖ್ಯಾಂತ್ಯಗೊಂಡಿದೆ.

You may also like