Home » ಬೆಳ್ತಂಗಡಿ: ಉಜಿರೆಯಲ್ಲಿ ಮಗನಿಂದ ತಂದೆಯ ಕೊಲೆ ಯತ್ನ: ಆರೋಪಿ ಮಗನ ಬಂಧನ!

ಬೆಳ್ತಂಗಡಿ: ಉಜಿರೆಯಲ್ಲಿ ಮಗನಿಂದ ತಂದೆಯ ಕೊಲೆ ಯತ್ನ: ಆರೋಪಿ ಮಗನ ಬಂಧನ!

0 comments
Crime News Bangalore

ಬೆಳ್ತಂಗಡಿ : ಕುಡಿದ ಮತ್ತಿನಲ್ಲಿ ತಂದೆ ಮಗನ ನಡುವೆ ನಡೆದ ಗಲಾಟೆ ನಡೆದಿರಯವ ಘಟನೆ ನಡೆದಿದೆ. ಈ ಗಲಾಟೆಯಲ್ಲಿ ತಂದೆ ಉಜಿರೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಮಗನನ್ನು ಬೆಳ್ತಂಗಡಿ ಪೊಲೀಸರು ಬಂಧನ ಮಾಡಿದ್ದಾರೆ.

ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮದ ಮಣಿಕೆ ನಿವಾಸಿ ಗಾರೆಕೆಲಸ ಮಾಡುತ್ತಿರುವ ನಾರಾಯಣ(52) ಮತ್ತು ಟಿಂಬರ್ ಕೆಲಸ ಮಾಡುತ್ತಿದ್ದ ಮಗ ಭರತ್ (25) ನಡುವೆ ಏ.19 ರಂದು ಮನೆಯಲ್ಲಿ ರಾತ್ರಿ ಸುಮಾರು 7:30 ಕ್ಕೆ ಕುಡಿದ ಮತ್ತಿನಲ್ಲಿ ಇಬ್ಬರ ನಡುವೆ ಗಲಾಟೆ ನಡೆದಿದೆ. ಈ ನಡುವೆ ಮನೆಯ ಹೊರಭಾಗದಲ್ಲಿದ್ದ ತಂದೆಗೆ ಕತ್ತಿಯಿಂದ ಕುತ್ತಿಗೆ ಮತ್ತು ಕೈಗೆ ಕಡಿದಿದ್ದಾನೆ. ತಕ್ಷಣ ಹತ್ತಿರದ ಮನೆಯವರು ಉಜಿರೆ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಈ ಕುರಿತು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

You may also like