Home » Bhatkala: ಹಿಂದೂ ಮನೆಗಳ ಮೇಲೆ ಕಲ್ಲುತೂರಾಟ – 7 ಮುಸ್ಲಿಂ ಬಾಲಕರ ಬಂಧನ

Bhatkala: ಹಿಂದೂ ಮನೆಗಳ ಮೇಲೆ ಕಲ್ಲುತೂರಾಟ – 7 ಮುಸ್ಲಿಂ ಬಾಲಕರ ಬಂಧನ

0 comments

Hindu neighbor gifts plot of land

Hindu neighbour gifts land to Muslim journalist

Bhatkala: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲ್ಲೂಕಿನ ಮುರುಡೇಶ್ವರ-ಬೈಲೂರು ಮಾರ್ಗದ ತೆಂಗಾರ ರಸ್ತೆಯ ಅಕ್ಕಪಕ್ಕದ ಕೆಲ ಹಿಂದೂ ಮನೆಗಳ ಮೇಲೆ ಸೋಮವಾರ ರಾತ್ರಿ ಬೈಕ್‌ನಲ್ಲಿ ಬಂದ 7 ಮಂದಿ ಮುಸ್ಲಿಂ ಬಾಲಕರು ಕಲ್ಲುತೂರಾಟ ನಡೆಸಿದ ಘಟನೆ ನಡೆದಿದೆ.

ಕಲ್ಲು ತೂರಾಟದಿಂದ ಮನೆಗಳ ಕಿಟಕಿ ಗಾಜುಗಳಿಗೆ ಹಾನಿಯಾಗಿದೆ. ಘಟನೆ ವೇಳೆ ಸಿಕ್ಕಿಬಿದ್ದ ಇಬ್ಬರು ಬಾಲಕರನ್ನು ಜನರೇ ಪೊಲೀಸರಿಗೆ ಒಪ್ಪಿಸಿದರು. ಬಳಿಕ ಪೊಲೀಸರು ಇನ್ನೂ ಐವರು ಬಾಲಕರನ್ನು ವಶಕ್ಕೆ ಪಡೆದಿದ್ದಾರೆ. ಇದರಿಂದ ಸ್ಥಳದಲ್ಲಿ ಕೆಲ ಹೊತ್ತು ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.

 ವಶಕ್ಕೆ ಪಡೆದು ಬಾಲಕರನ್ನು ವೈದ್ಯಕೀಯ ಪರೀಕ್ಷೆ ನಡೆಸಿದಾಗ, ಈ ಎಲ್ಲರೂ ಮಾದಕವಸ್ತು ಸೇವಿಸಿದ್ದರು ಎಂಬುದು ದೃಢಪಟ್ಟಿದೆ. ಎಲ್ಲರನ್ನೂ ಬಾಲ ನ್ಯಾಯಮಂಡಳಿ ಎದುರು ಹಾಜರುಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.‌ ‘ಮುನ್ನೆಚ್ಚರಿಕೆಯಾಗಿ ಬೈಲೂರು ಮತ್ತು ಮುರುಡೇಶ್ವರ ಭಾಗದಲ್ಲಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ. ಶಾಂತಿ ಸಭೆ ನಡೆಸಿ, ಸ್ಥಳೀಯರಲ್ಲಿ ಧೈರ್ಯ ಮೂಡಿಸಲಾಗಿದೆ.

You may also like