Home » ಬಿಜೆಪಿ ಕಾರ್ಯಕರ್ತ ಮುಕ್ಕಚ್ಚೇರಿ ಜುಬೇರ್‌ ಕೊಲೆ ಪ್ರಕರಣ; ಪ್ರಮುಖ ಆರೋಪಿ ಸುಹೇಲ್‌ಗೆ ಜೀವಾವಧಿ ಶಿಕ್ಷೆ ಪ್ರಕಟ

ಬಿಜೆಪಿ ಕಾರ್ಯಕರ್ತ ಮುಕ್ಕಚ್ಚೇರಿ ಜುಬೇರ್‌ ಕೊಲೆ ಪ್ರಕರಣ; ಪ್ರಮುಖ ಆರೋಪಿ ಸುಹೇಲ್‌ಗೆ ಜೀವಾವಧಿ ಶಿಕ್ಷೆ ಪ್ರಕಟ

0 comments

ಮಂಗಳೂರು, ಎ.28: ಉಳ್ಳಾಲ ಮುಕ್ಕಚ್ಚೇರಿ ನಿವಾಸಿ, ಬಿಜೆಪಿ ಕಾರ್ಯಕರ್ತ ಜುಬೇರ್‌ ಎನ್ನುವಾತನನ್ನು ಕಡಿದು ಕೊಲೆಗೈದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಗಳ ಪಾತ್ರ ಸಾಬೀತಾಗಿದ್ದು, ಪ್ರಧಾನ ಅಪರಾಧಿಗೆ ಮಂಗಳೂರಿನ 3 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

ಅಬ್ದುಲ್‌ ರಹಿಮಾನ್‌ ಸುಹೇಲ್‌ (23) ಶಿಕ್ಷೆಗೊಳಗಾದ ಅಪರಾಧಿ. ಇನ್ನುಳಿದ ಆರೋಪಿಗಳಿಗೆ 2022 ರಲ್ಲಿ ಶಿಕ್ಷೆ ಪ್ರಕಟಗೊಂಡಿತ್ತು.

2017 ರ ಅಕ್ಟೋಬರ್‌ 4 ರಂದು ರಾತ್ರಿ 7.55 ಕ್ಕೆ ಮುಕ್ಕಚ್ಚೇರಿ ಮಸೀದಿ ಎದುರು ಜುಬೇರ್‌ ತನ್ನ ಗೆಳೆಯ ಇಲಿಯಾಸ್‌ ಜೊತೆ ಮಾತನಾಡುತ್ತಿದ್ದಾಗ ಆರೋಪಿಗಳಾದ ಸುಹೇಲ್‌, ನಿಜಾಮ್‌, ಮುಸ್ತಾಫ, ಅಲ್ತಾಫ್‌, ಆಸಿಫ್‌, ನಾಸೀರ್‌ ಸೇರಿ ತಲ್ವಾರ್‌ ಕತ್ತಿಯಿಂದ ಜುಬೇರ್‌ಗೆ ಕಡಿದು ಕೊಲೆ ಮಾಡಿದ್ದರು. ಈ ಸಂದರ್ಭದಲ್ಲಿ ತಡೆಯಲು ಬಂದ ಇಲಿಯಾಸ್‌ ಅವರಿಗೂ ತಲವಾರಿನಿಂದ ಕಡಿದು ತೀವ್ರ ಗಾಯ ಮಾಡಿದ್ದರು. ಈ ಕುರಿತು ಉಳ್ಳಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಎ.20,2022 ರಂದು ಜುಬೇರ್‌ ಕೊಲೆ ಪ್ರಕರಣವನ್ನು ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಸಮಗ್ರ ವಿಚಾರಣೆ ನಡೆಸಿದ್ದು, ಅಪರಾಧ ಸಾಬೀತುಪಡಿಸಿ ತೀರ್ಪು ನೀಡಿದರು. 2ರಿಂದ 4 ನೇ ಆರೋಪಿಗಳಾದ ನಿಜಾಮ್‌, ತಾಜುದ್ದೀನ್‌, ಮುಸ್ತಾಫ ಎಂಬುವರಿಗೆ ಜೀವಾವಧಿ ಶಿಕ್ಷೆ ನೀಡಿದ್ದರೆ, 6ನೇ ಆರೋಪಿ ಅಸಿಫ್‌ ಮತ್ತು 7ನೇ ಆರೋಪಿ ನಾಸೀರ್‌ ಖುಲಾಸೆಗೊಂಡಿದ್ದಾಗಿ ತೀರ್ಪು ಪ್ರಕಟ ಮಾಡಿದ್ದರು. 5ನೇ ಆರೋಪಿ ಅಲ್ತಾಫ್‌ ಈ ನಡುವೆ ಮೃತಪಟ್ಟಿದ್ದ.

banner

ಪ್ರಮುಖ ಆರೋಪಿ ಮುಕ್ಕಚ್ಚೇರಿ ನಿವಾಸಿ ಅಬ್ದುಲ್‌ ರಹಿಮಾನ್‌ ಸುಹೇಲ್‌ ತಲೆಮರೆಸಿಕೊಂಡಿದ್ದ. ನಾಲ್ಕು ತಿಂಗಳ ಹಿಂದೆ ಆತನನ್ನು ಬಂಧನ ಮಾಡಿದ್ದು, 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.

You may also like