Home » ಬುರುಡೆ ಪ್ರಕರಣ ವಿಚಾರಣೆ 13ಕ್ಕೆ ಮುಂದೂಡಿಕೆ

ಬುರುಡೆ ಪ್ರಕರಣ ವಿಚಾರಣೆ 13ಕ್ಕೆ ಮುಂದೂಡಿಕೆ

0 comments

Hindu neighbor gifts plot of land

Hindu neighbour gifts land to Muslim journalist

ಬೆಳ್ತಂಗಡಿ: ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ನೀಡಿರುವ ವರದಿಯ ಬಗ್ಗೆ ಬೆಳ್ತಂಗಡಿ ನ್ಯಾಯಾಲಯದಲ್ಲಿ ಗುರುವಾರ ವಿಚಾರಣೆ ನಡೆದಿದ್ದು, ಪ್ರಕರಣದ ಮುಂದಿನ ವಿಚಾರಣೆಯನ್ನು ಫೆ.13ಕ್ಕೆ ಮುಂದೂಡಲಾಗಿದೆ.

ಪ್ರಕರಣದಲ್ಲಿ ಎಸ್‌ಐಟಿ ವರದಿ ಸಲ್ಲಿಕೆಯಾದ ಬೆನ್ನಲ್ಲಿಯೇ ಶ್ರೀಕ್ಷೇತ್ರ ಧರ್ಮಸ್ಥಳ ಪರವಾಗಿ ನ್ಯಾಯವಾದಿಗಳು ಅರ್ಜಿ ಸಲ್ಲಿಸಿ ಪ್ರಕರಣದಲ್ಲಿ ಧರ್ಮಸ್ಥಳದವರು ಸಂತ್ರಸ್ಥರಾಗಿದ್ದು, ತಮಗೂ ವಾದ ಮಂಡಿಸಲು ಅವಕಾಶ ನೀಡಬೇಕು ಎಂದು ಕೇಳಿಕೊಂಡಿದ್ದರು.

ಇದೇ ವಿಚಾರದಲ್ಲಿ ನ್ಯಾಯಾಲಯದಲ್ಲಿ ವಾದ ಪ್ರತಿವಾದ ನಡೆಯಿತು. ಧರ್ಮಸ್ಥಳ ಪರವಾಗಿ ಹೈಕೋರ್ಟ್ ಹಿರಿಯ ನ್ಯಾಯವಾದಿ ಸಿ.ವಿ.ನಾಗೇಶ್ ಅವರು ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ನ್ಯಾಯಾಧೀಶರ ಮುಂದೆ ವಾದ ಮಂಡಿಸಿದರು. ಎಸ್‌ಐಟಿ ಪರ ವಕೀಲರು ಧರ್ಮಸ್ಥಳವನ್ನು ಪ್ರಕರಣದಲ್ಲಿ ಭಾಗಿಯಾಗಲು ಅವಕಾಶ ಕೇಳಿರುವ ಅರ್ಜಿಗೆ ಆಕ್ಷೇಪಣೆ ಸಲ್ಲಿಕೆ ಮಾಡಿರುವುದಾಗಿ ತಿಳಿದು ಬಂದಿದೆ.

ಈಗಾಗಲೇ ಮಹೇಶ್ ಶೆಟ್ಟಿ ಹಾಗೂ ಇತರರ ಪರವಾಗಿ ಹಾಜರಾಗುತ್ತಿರುವ ನ್ಯಾಯವಾದಿಗಳು ಧರ್ಮಸ್ಥಳದವರನ್ನು ಈ ಪ್ರಕರಣದಲ್ಲಿ ಕಕ್ಷಿದಾರರಾಗಿಸುವುದಕ್ಕೆ ಆಕ್ಷೇಪಣೆ ಸಲ್ಲಿಸಿದ್ದಾರೆ. ನ್ಯಾಯಾಲಯ ವಿಚಾರಣೆಯನ್ನು ಫೆ.13 ಕ್ಕೆ ಮುಂದೂಡಿದ್ದು, ಅಂದು ಮಹೇಶ್ ಶೆಟ್ಟಿ ಪರ ವಕೀಲರು ವಾದ ಮಂಡಿಸಲಿದ್ದಾರೆ.

banner

ಎಸ್‌ಐಟಿ ಪರ ವಕೀಲರೂ ಆಕ್ಷೇಪಣೆ ಹಾಕಿರುವ ಹಿನ್ನೆಲೆಯಲ್ಲಿ ಅವರೂ ಈ ಬಗ್ಗೆ ವಾದ ಮಂಡಿಸಲಿದ್ದಾರೆ.

ನ್ಯಾಯಾಲಯಕ್ಕೆ ಹಾಜರಾದ ಚಿನ್ನಯ್ಯ ಸಾಕ್ಷಿ ದೂರುದಾರನಾಗಿ ಬಂದು ಜೈಲು ಸೇರಿ ಈಗ ಜಾಮೀನಿನ ಮೇಲೆ ಹೊರ ಬಂದಿರುವ ಚಿನ್ನಯ್ಯ ಹಾಗೂ ಆತನ ಪತ್ನಿ ಗುರುವಾರ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗಿದ್ದರು. ಅವರನ್ನು ಪ್ರಕರಣದಲ್ಲಿ ಭಾಗಿಗಳಾಗಲು ಅವಕಾಶ ನೀಡುವುದಕ್ಕೆ ತಮ್ಮ ಆಕ್ಷೇಪಣೆ ಇಲ್ಲ ಎಂದು ನ್ಯಾಯಾಲಯದ ಮುಂದೆ ಚಿನ್ನಯ್ಯನ ಪರ ವಕೀಲರು ತಿಳಿಸಿರುವುದಾಗಿ ತಿಳಿದು ಬಂದಿದೆ.

You may also like