Home » ಧರ್ಮಸ್ಥಳ ಕ್ಷೇತ್ರದ ಕುರಿತು ಅವಹೇಳನಕಾರಿ ಹೇಳಿಕೆ: ಗಿರೀಶ್‌ ಮಟ್ಟಣ್ಣನವರ್‌ ವಿರುದ್ಧ ಎಫ್‌ಐಆರ್‌ ದಾಖಲು

ಧರ್ಮಸ್ಥಳ ಕ್ಷೇತ್ರದ ಕುರಿತು ಅವಹೇಳನಕಾರಿ ಹೇಳಿಕೆ: ಗಿರೀಶ್‌ ಮಟ್ಟಣ್ಣನವರ್‌ ವಿರುದ್ಧ ಎಫ್‌ಐಆರ್‌ ದಾಖಲು

0 comments
Girish Mattannavar

ಬೆಂಗಳೂರು: ಧರ್ಮಸ್ಥಳ ದೇವಸ್ಥಾನ ಹಾಗೂ ಅಲ್ಲಿ ಮದುವೆಯಾದ ಮಹಿಳೆಯರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ಗಿರೀಶ್‌ ಮಟ್ಟಣ್ಣನವರ್‌ ವಿರುದ್ಧ ಬೆಂಗಳೂರಿನಲ್ಲಿ ಎಫ್‌ಐಆರ್‌ ದಾಖಲಾಗಿದೆ.

ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವ ಮತ್ತು ಮಹಿಳೆಯರ ಗೌರವಕ್ಕೆ ಚ್ಯುತಿ ತಂದಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಕಾವೇರಿ ಎನ್ನುವವರು ನೀಡಿದ ದೂರಿನ ಆಧಾರದಲ್ಲಿ ಬೆಂಗಳೂರಿನ ಸುಬ್ರಮಣ್ಯ ನಗರ ಪೊಲೀಸ್‌ ಠಾಣೆಯಲ್ಲಿ ಈ ಎಫ್‌ಐಆರ್‌ ದಾಖಲಾಗಿದೆ.

ಯೂಟ್ಯೂಬ್‌ ಚಾನೆಲ್‌ ಒಂದರಲ್ಲಿ ಪ್ರಸಾರವಾದ ವಿಡಿಯೋದಲ್ಲಿ ಗಿರೀಶ್‌ ಮಟ್ಟಣ್ಣನವರ್‌ ಅವರು ಧರ್ಮಸ್ಥಳ ಕ್ಷೇತ್ರ ಮತ್ತು ಅಲ್ಲಿನ ಸಂಪ್ರದಾಯಗಳ ಕುರಿತು ಅತ್ಯಂತ ಕೀಳಾಗಿ ಮಾತನಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖ ಮಾಡಲಾಗಿದೆ.

2023 ರ ಡಿಸೆಂಬರ್‌ 4 ರಂದು ಉಜಿರೆಯಲ್ಲಿ ನಡೆದಿದ್ದ ʼಜನಾಂದೋಲನʼ ಎಂಬ ಕಾರ್ಯಕ್ರಮದಲ್ಲಿ ಗಿರೀಶ್‌ ಮಟ್ಟಣ್ಣನವರ್‌ ಭಾಷಣ ಮಾಡಿದ್ದರು. ಈ ಭಾಷಣದ ವಿಡಿಯೋವನ್ನು ಇತ್ತೀಚೆಗೆ ಯೂಟ್ಯೂಬ್‌ ಚಾನೆಲ್‌ ಪ್ರಸಾರ ಮಾಡಿತ್ತು. ಈ ವಿಡಿಯೋದಲ್ಲಿ ಧರ್ಮಸ್ಥಳ ಕ್ಷೇತ್ರದಲ್ಲಿ ಮದುವೆಯಾದ ಮಹಿಳೆಯರ ಕುರಿತು ನೀಡಿದ್ದ ಹೇಳಿಕೆಗಳು ಭಕ್ತಾದಿಗಳ ಮತ್ತು ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ.

banner

 

You may also like