ಮೈಸೂರು: ಗೂಡ್ಸ್ ವಾಹನದಲ್ಲಿ ಅಕ್ರಮವಾಗಿ ಗೋವುಗಳನ್ನು ಸಾಗಿಸುತ್ತಿದ್ದುದನ್ನು ತಡೆದಿದ್ದಕ್ಕೆ ಯುವಕನ ಮೇಲೆ ಹಲ್ಲೆ ಮಾಡಲಾಗಿರುವ ಕುರಿತು ವರದಿಯಾಗಿದೆ. ಕಾರಿನಲ್ಲಿ ಬಂದ ನಾಲ್ವರು ಯುವಕನ ಮೇಲೆ ಹಲ್ಲೆ ನಡೆಸಿದ್ದಾರೆ. ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಕಟ್ಟೆಮಳಲವಾಡಿ ಬಳಿ ಈ ಘಟನೆ ನಡೆದಿದೆ.


ಹಿಂದೂ ಸಂಘಟನೆಯ ಯುವಕ ಚಂದ್ರಮೌಳಿ ಮೇಲೆ ಹಲ್ಲೆ ನಡೆಸಲಾಗಿದೆ. ಅನ್ಯಕೋಮಿನ ಯುವಕರು ಚಂದ್ರಮೌಳಿ ಮೇಲೆ ಹಲ್ಲೆ ಮಾಡಿದ್ದಾರೆ. ಗಾಯಗೊಂಡ ಚಂದ್ರಮೌಳಿಯನ್ನು ಹುಣಸೂರು ಸರಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹುಣಸೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
