Home Crime ಕಮಲಾಕರ್‌ ಭಟ್‌ಗೆ ಸುಚಿತ್ರಾಳಿಂದ ಹನಿಟ್ರ್ಯಾಪ್‌? ಬಿಗ್‌ ಟ್ವಿಸ್ಟ್

ಕಮಲಾಕರ್‌ ಭಟ್‌ಗೆ ಸುಚಿತ್ರಾಳಿಂದ ಹನಿಟ್ರ್ಯಾಪ್‌? ಬಿಗ್‌ ಟ್ವಿಸ್ಟ್

Hindu neighbor gifts plot of land

Hindu neighbour gifts land to Muslim journalist

ಕಾರವಾರ: ಸಿದ್ಧಾಪುರದ ವಸಂತ ನಾಯ್ಕ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹೊಸ ಟ್ವಿಸ್ಟ್‌ ದೊರಕಿದ್ದು, ಸುಚಿತ್ರಾ ಕಮಲಾಕರ ಭಟ್‌ಗೆ ಹನಿಟ್ರ್ಯಾಪ್‌ ಮಾಡಿ ಬೆದರಿಕೆ ಹಾಕಿದ್ದಾಳೆ ಎಂದು ಸುಚಿತ್ರಾ ಪತಿ ಮಹೇಶ್‌ ನಾಯ್ಕ ಗಂಭೀರ ಆರೋಪ ಮಾಡಿದ್ದಾರೆ.

ಆರೋಪಿ ಸುಚಿತ್ರಾ, ಜ್ಯೋತಿಷಿ ಕಮಲಾಕರ ಭಟ್‌ಗೆ ಹನಿಟ್ರ್ಯಾಪ್‌ ಮಾಡಿ ಖಾಸಗಿ ಕ್ಷಣಗಳ ವಿಡಿಯೋಗಳನ್ನು ಮಾಡಿ ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದಳು ಎಂದು ಮಹೇಶ್‌ ನಾಯ್ಕ ಮಾಧ್ಯಮಕ್ಕೆ ಹೇಳಿದ್ದಾರೆ.

ಕಮಲಾಕರ್‌ ಬಳಿ ಬಂದಿದ್ದ ಸುಚಿತ್ರಾ ನಂತರ ಖಾಸಗಿ ಕ್ಷಣಗಳ ವಿಡಿಯೋ ಮಾಡಿಟ್ಟಿದ್ದಳು. ಮಕ್ಕಳ ಜೊತೆ ನಾನು ಬರುತ್ತೇನೆ. ನನ್ನನ್ನು ಚೆನ್ನಾಗಿ ನೋಡಿಕೊಳ್ಳದಿದ್ದರೆ ಮರ್ಯಾದೆ ತೆಗೆಯುತ್ತೇನೆ ಎಂದು ಹೆದರಿಸುತ್ತಿದ್ದಳು. ಹೀಗೆ ಮರ್ಯಾದೆಗೆ ಅಂಜಿ ಕಮಲಾಕರ್‌ ಭಟ್‌ ಆಕೆಯನ್ನು ತನ್ನ ಬಳಿ ಇಟ್ಟುಕೊಂಡಿದ್ದ ಎನ್ನಲಾಗಿದೆ.

ಈ ವಿಚಾರವನ್ನು ನನ್ನ ಮಗಳು ತಿಳಿಸಿದ್ದು, ಮೊದಲು ಭಯದಿಂದ ಮಗಳು ಈ ವಿಷಯ ತಿಳಿಸಿರಲಿಲ್ಲ. ಈಗ ಸುಚಿತ್ರಾ ಬ್ಲ್ಯಾಕ್‌ಮೇಲ್‌ ಮಾಡಿರುವ ಕುರಿತು ತನ್ನ ಜೊತೆ ಹೇಳಿದ್ದಾಳೆ ಎಂದು ಮಹೇಶ್‌ ನಾಯ್ಕ ತಿಳಿಸಿದ್ದಾರೆ.