Home » ಘೋರ ದುರಂತ: ರಥದ ಚಕ್ರಕ್ಕೆ ಸಿಲುಕಿ ಮಹಿಳೆಯರ 2 ಕಾಲು ತುಂಡು!

ಘೋರ ದುರಂತ: ರಥದ ಚಕ್ರಕ್ಕೆ ಸಿಲುಕಿ ಮಹಿಳೆಯರ 2 ಕಾಲು ತುಂಡು!

0 comments

ಕಲಬುರಗಿ: ಜಿಲ್ಲೆಯ ಯಡ್ರಾಮಿ ತಾಲೂಕಿನ ಅರಳಗುಂಡಿ ಗ್ರಾಮದಲ್ಲಿ ಶ್ರೀ ಶರಣಬಸವೇಶ್ವರ ಜಾತ್ರೆಯ ರಥೋತ್ಸವದ ಸಂಭ್ರಮದಲ್ಲಿ ರಥವನ್ನು ಎಳೆಯುವ ಸಂದರ್ಭದಲ್ಲಿ ಭಕ್ತರ ದಟ್ಟಣೆಯ ನಡುವೆ ಮಹಿಳೆಯೊಬ್ಬರು ರಥದ ಚಕ್ರಕ್ಕೆ ಸಿಲುಕಿ ತಮ್ಮ ಎರಡು ಕಾಲುಗಳನ್ನು ಕಳೆದುಕೊಂಡ ಘಟನೆ ನಡೆದಿದೆ.

ಸಾವಿರಾರು ಭಕ್ತರು ರಥೋತ್ಸವದಲ್ಲಿ ಭಾಗಿಯಾಗಿದ್ದು, ಭಕ್ತರ ನೂಕುನುಗ್ಗಲಿನಲ್ಲಿ ಸಿಲುಕಿದ ನಾಗಮ್ಮ ಎನ್ನುವ ಮಹಿಳೆ ಆಯತಪ್ಪಿ ರಥದ ಬೃಹತ್‌ ಚಕ್ರದ ಅಡಿಗೆ ಬಿದ್ದಿದ್ದಾರೆ. ರಥದ ವೇಗ ಹೆಚ್ಚಾಗಿದ್ದರಿಂದ ಚಕ್ರವು ಮಹಿಳೆಯ ಕಾಲುಗಳ ಮೇಲೆ ಹರಿದಿದ್ದು, ಪರಿಣಾಮ ಎರಡೂ ಕಾಲುಗಳು ತುಂಡಾಗಿದೆ. ಕೂಡಲೇ ಭಕ್ತರು, ಸ್ಥಳೀಯರು ರಥವನ್ನು ನಿಲ್ಲಿಸಿದ್ದು, ರಕ್ತದ ಮಡುವಿನಲ್ಲಿದ್ದ ಮಹಿಳೆಯನ್ನು ರಕ್ಷಣೆ ಮಾಡಿದ್ದಾರೆ.

ಗಂಭೀರ ಗಾಯಗೊಂಡ ನಾಗಮ್ಮ ಅವರನ್ನು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಮಹಿಳೆಯ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ. ಜಾತ್ರೆಯ ಸಂಭ್ರಮದಲ್ಲಿ ಮುನ್ನೆಚ್ಚರಿಕೆಯ ಕ್ರಮಗಳ ಕೊರತೆಯೇ ಈ ಅನಾಹುತಕ್ಕೆ ಕಾರಣ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದು, ಘಟನಾ ಸ್ಥಲ್ಕೆ ಯಡ್ರಾಮಿ ಪೊಲೀಸರು ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.

You may also like