41
ಹಾಸನದಿಂದ ಮಂಗಳೂರಿನತ್ತ ತೆರಳುತ್ತಿದ್ದ ಈಚರ್ ಲಾರಿಯನ್ನು ಬಜರಂಗದಳದ ಮಾಹಿತಿ ಆಧರಿಸಿ ನೆಕ್ಕಿಲಾಡಿ ಪ್ರದೇಶದಲ್ಲಿ ಗಸ್ತು ನಿರತ ಪೊಲೀಸರು ತಡೆದು ಪರಿಶೀಲನೆ ನಡೆಸಿದರು. ಈ ವೇಳೆ ಲಾರಿಯಲ್ಲಿ 16 ಜಾನುವಾರುಗಳನ್ನು ಸಾಗಿಸಲಾಗುತ್ತಿದ್ದುದು ಪತ್ತೆಯಾಯಿತು.


ಕಾರ್ಯಾಚರಣೆಯ ಸಂದರ್ಭದಲ್ಲಿ ಓರ್ವ ಆರೋಪಿ ಸ್ಥಳದಿಂದ ಪರಾರಿಯಾಗಿದ್ದು, ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಈ ಸಂಬಂಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಮುಂದುವರಿದಿದೆ.
