Home Crime ಕಾರವಾರ: ಮದುವೆಗೆ ಯುವತಿ ಒಪ್ಪಿಲ್ಲವೆಂದು ಪುರೋಹಿತ ಆತ್ಮಹತ್ಯೆ

ಕಾರವಾರ: ಮದುವೆಗೆ ಯುವತಿ ಒಪ್ಪಿಲ್ಲವೆಂದು ಪುರೋಹಿತ ಆತ್ಮಹತ್ಯೆ

Hindu neighbor gifts plot of land

Hindu neighbour gifts land to Muslim journalist

ಕಾರವಾರ: ಅಂಕೋಲದಲ್ಲಿ ಪ್ರೀತಿಸಿದ ಯುವತಿ ವಿವಾಹಕ್ಕೆ ಒಪ್ಪಿಗೆ ನೀಡದ ಹಿನ್ನೆಲೆಯಲ್ಲಿ ಮನನೊಂದು ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಅಂಕೋಲಾ ತಾಲೂಕಿನ ಅಸ್ಲಗದ್ದೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಪವನ್‌ ಭಟ್‌ (24) ಆತ್ಮಹತ್ಯೆ ಮಾಡಿಕೊಂಡ ಯುವಕ.

ಪವನ್‌ ಭಟ್‌ ವೃತ್ತಿಯಿಂದ ಪೌರೋಹಿತ್ಯ ಮಾಡಿಕೊಂಡು ಜೀವನ ಮಾಡುತ್ತಿದ್ದ. ಆತನ ಊರಿನ ಯುವತಿ ಜೊತೆ ಪ್ರೀತಿ ಕೂಡಾ ಮಾಡುತ್ತಿದ್ದ ಎನ್ನಲಾಗಿದೆ. ಈ ಸಂಬಂಧವನ್ನು ವಿವಾಹವಾಗಿ ಮುಂದುವರೆಸಲು ಯುವತಿಗೆ ಒತ್ತಾಯ ಮಾಡಿದ್ದಾನೆ. ಆದರೆ ಯುವತಿ ವಿವಾಹವಾಗಲು ನಿರಾಕರಿಸಿದ್ದಾಳೆ ಎಂದು ವರದಿಯಾಗಿದೆ. ಇದರಿಂದ ನೊಂದ ಪವನ್‌ ಭಟ್‌ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ವರದಿಯಾಗಿದೆ.

ಅಂಕೋಲಾ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ಮಾಡಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.