ಬೆಂಗಳೂರು ಜು.16: ಅಣ್ಣನ ಜೊತೆ ಮದುವೆಯಾಗಲು ನಿರಾಕರಿಸಿದ್ದಕ್ಕೆ ತಮ್ಮನಿಂದ ಚಾಕು ಇರಿತಕ್ಕೆ ಒಳಗಾಗಿದ್ದ ಯುವತಿ ಚಿಕಿತ್ಸೆ ಫಲಿಸದೆ ಸಾವಿಗೀಡಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಅಮೃತಾ ಮತ್ತು ಆರೋಪಿ ಸೂರ್ಯ ಸಹೋದರ ಧನುಷ್ ಪರಸ್ಪರ ಪ್ರೀತಿಸುತ್ತಿದ್ದರು. ಇವರೆಲ್ಲ ಒಂದೇ ಏರಿಯಾದವರಾಗಿದ್ದು, ಓಂ ಶಕ್ತಿ ಮಾಲೆ ಹಾಕುವ ಸಂದರ್ಭ ಎರಡು ಕುಟುಂಬಗಳ ನಡುವೆ ಪರಿಚಯವಾಗಿ ಅದೇ ಪರಿಚಯದಿಂದ ಧನುಷ್ ಮತ್ತು ಅಮೃತಾ ಆತ್ಮೀರಾಗಿದ್ದರು. ನಂತರ ಪ್ರೀತಿಸ ತೊಡಗಿದರು.
ಆದರೆ ಧನುಷ್ಗೆ ಈಗಾಗಲೇ ಮದುವೆಯಾಗಿ ಒಂದು ಮಗುವಿದ್ದು, ಪತ್ನಿಯಿಂದ ಆತ ವಿಚ್ಛೇದನ ಪಡೆದಿದ್ದ. ಈ ವಿಷಯವನ್ನು ಅಮೃತಾಳಿಂದ ಮುಚ್ಚಿಟ್ಟಿದ್ದ ಎನ್ನಲಾಗಿದೆ. ಈ ವಿಷಯ ಗೊತ್ತಾದ ನಂತರ ಧನುಷ್ನಿಂದ ಅಮೃತಾ ದೂರಾಗಿದ್ದು, ಜು.13 ರಂದು ಯುವತಿ ಮನೆ ಬಳಿ ಧನುಷ್ ಸಹೋದರ ಸೂರ್ಯ ಗಲಾಟೆ ಮಾಡಿದ್ದು, ಚಾಕು ಇರಿದಿದ್ದ.
ಪ್ರಕರಣ ಸಂಬಂಧ ಆರೋಪಿಗಳಾದ ಸೂರ್ಯ ಮತ್ತು ಧನುಷ್ನನ್ನು ಪೊಲೀಸರು ಬಂಧನ ಮಾಡಿದ್ದು, ಜೀವನ್ ಭೀಮಾನಗರ ಠಾಣೆಯಲ್ಲಿ ಕೇಸು ದಾಖಲಾಗಿದೆ.
22 ವರ್ಷದ ಅಮೃತಾ ಎಲ್ಎಲ್ಬಿ ವಿದ್ಯಾರ್ಥಿನಿಯಾಗಿದ್ದು, ದಾರುಣ ಅಂತ್ಯ ಕಂಡಿದ್ದಾಳೆ.

