Home Crime ಮನೆ ಮುಂದೆ ಬಂದು ಕೆಮ್ಮಿದ್ದಕ್ಕೆ ಮಾರಣಾಂತಿಕ ಹಲ್ಲೆ, ವ್ಯಕ್ತಿ ಸಾವು!

ಮನೆ ಮುಂದೆ ಬಂದು ಕೆಮ್ಮಿದ್ದಕ್ಕೆ ಮಾರಣಾಂತಿಕ ಹಲ್ಲೆ, ವ್ಯಕ್ತಿ ಸಾವು!

Delhi

Hindu neighbor gifts plot of land

Hindu neighbour gifts land to Muslim journalist

ಮನೆ ಮುಂದೆ ಬಂದು ಕೆಮ್ಮಿದ್ದಾನೆ ಎನ್ನುವ ಕಾರಣಕ್ಕೆ ವ್ಯಕ್ತಿಯೋರ್ವನಿಗೆ ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ರಾಮನಗರ ತಾಲೂಕಿನ ಬಿಡದಿಯಲ್ಲಿ ನಡೆದಿದೆ. ರಾಜಸ್ಥಾನ ಮೂಲದ ವ್ಯಕ್ತಿಯೊಬ್ಬ ಕೆಮ್ಮಿದ ವಿಚಾರ ವಿಕೋಪಕ್ಕೆ ಹೋಗಿದೆ.

ವಿನೋದ್‌ ಕುಮಾರ್‌ ಶೈನಿ (34) ಈತ ರಾಜಸ್ಥಾನ ಮೂಲದ ವ್ಯಕ್ತಿಯಾಗಿದ್ದು, ಕಳೆದ 11 ವರ್ಷಗಳಿಂದ ಬಿಡದಿಯ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ಅಲ್ಲೇ ವಾಸವಾಗಿದ್ದರು. ಮೂರು ದಿನಗಳ ಹಿಂದೆ ಪಕ್ಕದ ಮನೆಯ ಸಂಜಯ್‌ ಅವರೊಂದಿಗೆ ಮಾತಿನ ಚಕಮಕಿ ನಡೆದಿದೆ. ಕೆಮ್ಮಿದ್ದಾನೆ ಎನ್ನುವ ವಿಚಾರಕ್ಕೆ ಜಗಳವಾಗಿದ್ದು, ಈ ವೇಳೆ ಸಂಜಯ್‌, ಹೊಂಬಯ್ಯ, ವಿಜಯ್‌ ಸೇರಿ ಇತರರು ವಿನೋದ್‌ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಆರೋಪವಿದೆ.

ವಿನೋದ್‌ ಈ ಮಾರಣಾಂತಿಕ ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡಿದ್ದು, ಕೂಡಲೇ ಅವರನ್ನು ಬಿಡದಿಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ಮೃತಪಟ್ಟಿರುವ ಕುರಿತು ವರದಿಯಾಗಿದೆ.

ಈ ಘಟನೆ ಸಂಬಂಧ ಬಿಡದಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.