ಹುಡುಗಿ ಆಸೆ ತೋರಿಸಿ ವ್ಯಕ್ತಿಯನ್ನು ಸುಲಿಗೆ ಮಾಡಿದ ಘಟನೆ ಬೆಂಗಳೂರಲ್ಲಿ ನಡೆದಿದೆ. ಈ ಪ್ರಕರಣಕ್ಕೆ ಸಂಬಂದಿಸಿದಂತೆ 11 ಮಂದಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಚೇತನ್ ಮನು, ಶಾಬು , ಮಂಜುನಾಥ, ಜಯಕುಮಾರ್, ಅರುಣ ಕೀರ್ತಿ, ಕಾಂತ ರಾಜು, ಸಂದೀಪ್ ಬಂಧಿತ ಆರೋಪಿಗಳು. ಇವರು ಆ್ಯಪ್ ಒಂದರಲ್ಲಿ ಹುಡುಗಿಯರು ಇದ್ದಾರೆ ಎಂದು ಮೊದಲು ಪೋಸ್ಟ್ ಮಾಡಿದ್ದರು. ಇದನ್ನು ನಂಬಿ ಹುಡುಗಿಯನ್ನು ಭೇಟಿಯಾಗಲು ಹೋಗಿದ್ದ ವ್ಯಕ್ತಿಯೊಬ್ಬ ಆರೋಪಿಗಳ ಜೊತೆ ಕೆಜಿ ಹಳ್ಳಿಯ ಹೆಚ್ಆರ್ಬಿಆರ್ ಲೇಔಟ್ ಬಳಿ ತೆರಳಿದ್ದ. ಈ ವೇಳೆ ಆಟೋದಲ್ಲಿ ಯುವತಿಯರು ಕುಳಿತಿದ್ದರು. ಅವರನ್ನು ಭೇಟಿಯಾಗುವ ಮುನ್ನವೇ ಆರೋಪಿಗಳು ವ್ಯಕ್ತಿಯನ್ನು ಅಪಹರಿಸಿದ್ದಾರೆ.
ಬಳಿಕ ಆಟೋದಲ್ಲಿ ನಗರದ ವಿವಿಧ ಭಾಗದಲ್ಲಿ ಸುತ್ತಾಡಿಸಿ, ಹಣ ಮೊಬೈಲ್, ಚೈನ್ ಕಿತ್ತುಕೊಂಡು ಪರಾರಿಯಾಗಿದ್ದರು. ಘಟನೆ ಬಗ್ಗೆ ಸಿಸಿಬಿಗೆ ಮಾಹಿತಿ ಬಂದಿತ್ತು. ಮಾಹಿತಿ ಮೇರೆ ದೂರು ಪಡೆದು ಕೇಸ್ ದಾಖಲಿಸಿಕೊಂಡು, ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ
