ಬೆಂಗಳೂರು: ಮಂಗಳೂರಿನ ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್ ಶಾರೀಕ್ನನ್ನು ದೋಷಿ ಎಂದು ಬೆಂಗಳೂರಿನ ಎನ್ಐಎ ವಿಶೇಷ ನ್ಯಾಯಾಲಯವು ಘೋಷಿಸಿದೆ. ಆತನಿಗೆ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಮತ್ತು ₹94,000 ದಂಡ ವಿಧಿಸಿ ಆದೇಶ ಹೊರಡಿಸಿದೆ.


2022ರ ನವೆಂಬರ್ 19ರಂದು ಮಂಗಳೂರಿನ ಕಂಕನಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿತ್ತು. ಅಂದು ಸಂಜೆ ಸುಮಾರು 4:40ಕ್ಕೆ ಶಾರೀಕ್ ತನ್ನ ಬಳಿಯಿದ್ದ ಐಇಡಿ ಅಳವಡಿಸಿದ ಕುಕ್ಕರ್ ಬಾಂಬ್ ಅನ್ನು ಆಟೋರಿಕ್ಷಾದಲ್ಲಿ ಸಾಗಿಸುತ್ತಿದ್ದಾಗ ಅದು ಆಕಸ್ಮಿಕವಾಗಿ ಸ್ಫೋಟಗೊಂಡಿತ್ತು. ಈ ರಭಸಕ್ಕೆ ಆರೋಪಿ ಶಾರೀಕ್ ಮತ್ತು ಆಟೋ ಚಾಲಕ ಪುರುಷೋತ್ತಮ್ ಪೂಜಾರಿ ಇಬ್ಬರೂ ಗಂಭೀರವಾಗಿ ಗಾಯಗೊಂಡಿದ್ದರು.
ಅದೃಷ್ಟವಶಾತ್ ಬಾಂಬ್ ಜನನಿಬಿಡ ಪ್ರದೇಶಕ್ಕೆ ತಲುಪುವ ಮೊದಲೇ ಸ್ಫೋಟಿಸಿದ್ದರಿಂದ ಭಾರಿ ಪ್ರಮಾಣದ ಪ್ರಾಣಾಪಾಯ ತಪ್ಪಿತ್ತು.
