ಮಂಗಳೂರು: ಮಹಿಳೆಯರೊಂದಿಗೆ ಲೈಂಗಿಕ ದೌರ್ಜನ್ಯ ಆರೋಪ ಹೊತ್ತಿರುವ ಹಿನ್ನೆಲೆಯಲ್ಲಿ ಮೂಡುಬಿದಿರೆ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಸಂದೇಶ್ರನ್ನು ಸೇವೆಯಿಂದ ಅಮಾನತು ಮಾಡಿ ಮಂಗಳೂರು ನಗರ ಪೊಲೀಸ್ ಆಯುಕ್ತರು ಆದೇಶ ಹೊರಡಿಸಿದ್ದಾರೆ.

ಕೌಟುಂಬಿಕ ಕಲಹಕ್ಕೆ ಸಂಬಂಧಪಟ್ಟಂತೆ ದೂರು ನೀಡಲು ಬಂದಿದ್ದ ಮಹಿಳೆಯರ ಜೊತೆ ಇನ್ಸ್ಪೆಕ್ಟರ್ ಸಂದೇಶ್ ಅತ್ಯಂತ ಕೀಳುಮಟ್ಟದಲ್ಲಿ ವರ್ತಿಸಿದ್ದರು ಎನ್ನಲಾಗಿದೆ. ಸಂತ್ರಸ್ತ ಮಹಿಳೆಯರನ್ನು ಮಂಚಕ್ಕೆ ಕರೆದು ಅಸಭ್ಯ ರೀತಿಯಲ್ಲಿ ವರ್ತಿಸುವ ಆರೋಪ ಕೇಳಿ ಬಂದ ಬೆನ್ನಲ್ಲೇ ಜೊತೆಗೆ ಇದಕ್ಕೆ ಪೂರಕವಾದ ಆಡಿಯೋ ಮತ್ತು ವಿಡಿಯೋ ತುಣುಕುಗಳು ವೈರಲ್ ಆಗಿತ್ತು. ಇದು ಇಲಾಖೆಗೆ ಮುಜುಗರ ತಂದಿತ್ತು.
ಈ ಪ್ರಕರಣದ ಸಾರ್ವಜನಿಕ ವಲಯದಲ್ಲಿ ದೊಡ್ಡ ಮಟ್ಟದ ಚರ್ಚೆಗೆ ಗ್ರಾಸವಾಗುತ್ತಿದ್ದಂತೆ, ರಾಜ್ಯ ಮಹಿಳಾ ಆಯೋಗವು ಸ್ವಯಂಪ್ರೇರಿತ (ಸುಮೊಟೋ) ದೂರು ದಾಖಲಿಸಿದೆ. ಎಸಿಪಿ ಶ್ರೀಕಾಂತ್ ಅವರು ಪ್ರಕರಣದ ತನಿಖೆ ನಡೆಸಿ ಪ್ರಾಥಮಿಕ ವರಸಿ ಸಲ್ಲಿಸಿದ್ದರು.
