ಬೆಳ್ತಂಗಡಿ: ಮೂಡುಬಿದಿರೆ ಬಸ್ ನಿಲ್ದಾಣದಲ್ಲಿ ಜು.18ರಂದು ಮಧ್ಯಾಹ್ನ ಯುವಕನೋರ್ವ ತಲವಾರು ಹಿಡಿದುಕೊಂಡು ಮೊಬೈಲ್ ಅಂಗಡಿಗೆ ನುಗ್ಗಿ ಗಲಾಟೆ ಮಾಡಿದ ಘಟನೆ ನಡೆದಿದೆ.

ಬಸ್ಸು ನಿಲ್ದಾಣದಲ್ಲಿರುವ ಮೊಬೈಲ್ ಅಂಗಡಿಯೊಂದಕ್ಕೆ ತಲವಾರು ಹಿಡಿದುಕೊಂಡು ಹೋದ ಯುವಕ ನೇರವಾಗಿ ಮೊಬೈಲ್ ಅಂಗಡಿಯವರಲ್ಲಿ ಗಲಾಟೆಗಿಳಿದಿದ್ದಾನೆ. ಗ್ರಾಹಕರು ಇರುವಾಗಲೇ ತಲವಾರು ಝಳಪಿಸಿದ ಯುವಕನನ್ನು ಅಲ್ಲಿನ ಕೆಲ ಯುವಕರು ಉಪಾಯದಿಂದ ಹಿಡಿದು ಪೊಲೀಸರಿಗೊಪ್ಪಿಸಿದ್ದಾರೆ.
ಮೊದಲು ತಾನು ಬೆಳ್ತಂಗಡಿಯ ಪೆರಿಂಜೆಯವನು ಎಂದು ಹೇಳಿಕೊಂಡಿರುವ ಯುವಕ ತನಗೆ ಕೋಟೆಬಾಗಿಲಿನ ಸಂದೇಶ್ ಎಂಬಾತ ತಲವಾರು ನೀಡಿದ್ದಾನೆ ಎಂದು ಹೇಳಿದ್ದಾನೆನ್ನಲಾಗಿದೆ.
ಆತ ಕೈಯಲ್ಲಿ ತಲವಾರು ಹಿಡಿದುಕೊಂಡು ಮೊಬೈಲ್ ಅಂಗಡಿ ಹೋಗುವುದು ಮತ್ತು ಮೊಬೈಲ್ ಅಂಗಡಿಯವರಲ್ಲಿ ಜಗಳ ಮಾಡುವ ವೀಡಿಯೋ ವೈರಲ್ ಆಗಿದೆ.ಪೊಲೀಸರು ಈ ಯುವಕನನ್ನು ವಿಚಾರಣೆ ನಡೆಸುತ್ತಿದ್ದಾರೆ. ಈತ ಪೆರಿಂಜೆ ನಿವಾಸಿ ಎಂಬುದು ಇನ್ನೂ ಖಚಿತವಾಗಿಲ್ಲ.

