Home » ನೆಲ್ಯಾಡಿ: ಕೋಮು ಸೌಹಾರ್ದಕ್ಕೆ ಧಕ್ಕೆ ತರುವ ಬರಹ: ಇಬ್ಬರ ಬಂಧನ

ನೆಲ್ಯಾಡಿ: ಕೋಮು ಸೌಹಾರ್ದಕ್ಕೆ ಧಕ್ಕೆ ತರುವ ಬರಹ: ಇಬ್ಬರ ಬಂಧನ

0 comments

ನೆಲ್ಯಾಡಿ: ಸಾಮಾಜಿಕ ಜಾಲತಾಣಗಳಲ್ಲಿ ಧರ್ಮಗಳ ನಡುವೆ ವೈಮನಸ್ಸು ಮತ್ತು ದ್ವೇಷ ಉಂಟುಮಾಡುವ ಪೋಸ್ಟ್‌ ಹಂಚಿಕೊಂಡ ಆರೋಪದ ಮೇಲೆ ಇಬ್ಬರು ಯುವಕರನ್ನು ಮಣಿಪಾಲ ಪೊಲೀಸರು ಬಂಧನ ಮಾಡಿದ್ದಾರೆ.

ಬಂಧಿತರನ್ನು ಕಡಬ ತಾಲೂಕಿನ ಗುಂಡ್ಯ ಸಿರಿಬಾಗಿಲು ನಿವಾಸಿ ಹಿತೇಶ್‌ ಎ ಹಾಗೂ ಬಂಟ್ವಾಳ ತಾಲೂಕಿನ ನಿತೇಶ್‌ ಕೆ ಎಂದು ಗುರುತಿಸಲಾಗಿದೆ.

ಇವರು ಕಾರ್ಕಳ ಮೂಲದ ವಿವಾಹಿತ ಹಿಂದೂ ಮಹಿಳೆ ಹಾಗೂ ಮುಸ್ಲಿಂ ಯುವಕನೋರ್ವನ ವಿಚಾರವಾಗಿ ವ್ಯಂಗ್ಯವಾಗಿ ಪೋಸ್ಟ್‌ ಮಾಡಿದ್ದಲ್ಲದೆ, ಧರ್ಮಗಳ ನಡುವೆ ಸಂಘರ್ಷಕ್ಕೆ ಪ್ರಚೋದನೆ ನೀಡುವಂತಹ ಬರಹಗಳನ್ನು ಹಾಕಿದ್ದರು ಎಂದು ಆರೋಪಿಸಲಾಗಿದೆ.

ಪತ್ತೆ ಹಚ್ಚಿದ್ದು ಯಾವ ರೀತಿ?
ಆರೋಪಿಗಳು 2025ರ ಮೇಲೆ ಮೇ 16 ರಂದು ಇನ್‌ಸ್ಟಾಗ್ರಾಂನಲ್ಲಿ ಈ ವಿವಾದಾತ್ಮಕ ಪೋಸ್ಟ್‌ ಹಂಚಿಕೊಂಡಿದ್ದರು. ಈ ಕುರಿತು ʼಮೆಟಾಡಾಟಾʼ ಬಳಸಿ ಆರೋಪಿಗಳ ಮಾಹಿತಿಯನ್ನು ಸಂಗ್ರಹನೆ ಮಾಡಿದ್ದರು. ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದ ಈ ಪ್ರಚೋದನಾಕಾರಿ ಪೋಸ್ಟ್‌ ಕುರಿತು ಪೊಲೀಸರು ಸ್ವಯಂಪ್ರೇರಿತವಾಗಿ ದೂರು ದಾಖಲಿಸಿಕೊಂಡಿದ್ದರು.

banner

ಫೆ.1 ರಂದು ಮಂಗಳೂರಿನ ಲಾಲ್‌ಭಾಗ್‌ ಬಳಿ ಕಾರ್ಯಾಚರಣೆ ನಡೆಸಿದ ಮಣಿಪಾಲ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧನ ಮಾಡಿದ್ದರು. ಬಂಧಿತರಿಂದ ಕೃತ್ಯಕ್ಕೆ ಬಳಸಲಾದ ಮೊಬೈಲ್‌ಫೋನ್‌ಗಳನ್ನು ವಶಪಡಿಸಲಾಗಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಶಾಂತಿ ಕದಡುವ ಕೆಲಸ ಮಾಡುವವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಪೊಲೀಸ್‌ ಇಲಾಖೆ ಎಚ್ಚರಿಕೆ ನೀಡಿದೆ ಎಂದು ವರದಿಯಾಗಿದೆ.

You may also like