Home » ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣ: ಕೊಚ್ಚಿಯಲ್ಲಿ ಅಡಗಿದ್ದ ಇನ್ನೋರ್ವ ಆರೋಪಿಯ ಬಂಧನ

ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣ: ಕೊಚ್ಚಿಯಲ್ಲಿ ಅಡಗಿದ್ದ ಇನ್ನೋರ್ವ ಆರೋಪಿಯ ಬಂಧನ

0 comments

ಮಂಗಳೂರು: ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಇನ್ನೋರ್ವ ಆರೋಪಿಯನ್ನು ಎನ್‌ಐಎ ಅಧಿಕಾರಿಗಳು ಕೇರಳದ ಕೊಚ್ಚಿಯಲ್ಲಿ ಬಂಧನ ಮಾಡಿದ್ದಾರೆ.

ತಲೆಮರೆಸಿಕೊಂಡ ಆರೋಪಿಗಳು ಎಂದು ಘೋಷಿಸಲ್ಪಟ್ಟಿದ್ದ ಸುಳ್ಯ ತಾಲೂಕಿನ ಕಲ್ಲುಮುಟ್ಲು ನಿವಾಸಿ ಉಮರ್‌ ಫಾರೂಕ್‌ ನನ್ನು ಕೊಚ್ಚಿಯಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಬಂಧನ ಮಾಡಲಾಗಿದೆ. ಈ ಪ್ರಕರಣದಲ್ಲಿ 20 ಕ್ಕೂ ಹೆಚ್ಚು ಮಂದಿಯನ್ನು ಬಂಧನ ಮಾಡಲಾಗಿದ್ದು, ಆರು ಮಂದಿ ಕೈಗೆ ಸಿಗದೆ ತಲೆಮರೆಸಿಕೊಂಡಿದ್ದರು. ಇವರ ಪತ್ತೆಗಾಗಿ ತಲಾ ಎರಡು ಲಕ್ಷದ ಬಹುಮಾನವನ್ನು ಕೂಡಾ ಘೋಷಣೆ ಮಾಡಲಾಗಿತ್ತು.

ಎನ್‌ಐಎ ಇತ್ತೀಚೆಗೆ ಜುಲೈ 11 ರಂದು ಇಬ್ಬರು ಆರೋಪಿಗಳಾದ ನೌಷದ್‌ ಹಾಗೂ ನಾಸೀರ್‌ನನ್ನು ಬಂಧನ ಮಾಡಿತ್ತು. ವಿಚಾರಣೆ ಸಂದರ್ಭದಲ್ಲಿ ಉಮ್ಮರ್‌ ಫಾರೂಕ್‌ ಕೊಚ್ಚಿಯಲ್ಲಿ ಅಡಗಿರುವ ಕುರಿತು ಮಾಹಿತಿ ಪಡೆದ ಅಧಿಕಾರಿಗಳು ಈತನ ಬಂಧನ ಮಾಡಿದೆ. ಕೃತ್ಯ ಎಸಗಿದ ಪ್ರಮುಖ ಆರೋಪಿಗಳಿಗೆ ತಲೆಮರೆಸಿಕೊಳ್ಳಲು ಉಮ್ಮರ್‌ ಫಾರೂಕ್‌ ಸಹಕರಿಸಿದ್ದ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಪ್ರಕರಣದ 13ನೇ ಆರೋಪಿಯೆಂದು ಗುರುತಿಸಲಾಗಿತ್ತು.

ಈತ ಕೊಚ್ಚಿನಲ್ಲಿ ವಾಸ್ತವ್ಯ ಹೂಡಿ ಅಲ್ಲಿಯೇ ಕೆಲಸಕ್ಕೂ ಸೇರಿಕೊಂಡಿದ್ದ ಎನ್ನುವ ಕುರಿತು ವರದಿಯಾಗಿದೆ.

banner

You may also like