Home » ಪುತ್ತೂರು: ವಿವಾಹವಾಗುವುದಾಗಿ ನಂಬಿಸಿ ಮಗು ಕರುಣಿಸಿದ ಪ್ರಕರಣ; ಸಂತ್ರಸ್ತೆಯಿಂದ ಆತ್ಮಹತ್ಯೆಗೆ ಯತ್ನ?

ಪುತ್ತೂರು: ವಿವಾಹವಾಗುವುದಾಗಿ ನಂಬಿಸಿ ಮಗು ಕರುಣಿಸಿದ ಪ್ರಕರಣ; ಸಂತ್ರಸ್ತೆಯಿಂದ ಆತ್ಮಹತ್ಯೆಗೆ ಯತ್ನ?

0 comments

Hindu neighbor gifts plot of land

Hindu neighbour gifts land to Muslim journalist

ಪುತ್ತೂರು : ವಿವಾಹವಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಮಾಡಿ ನಂತರ ಮಗು ಕರುಣಿಸಿದ ಪ್ರಕರಣದಲ್ಲಿ ವಂಚನೆಗೊಳಗಾದ ಯುವತಿ ಸೋಮವಾರ ನೇಣು ಬಿಗಿದು ಆತ್ಮಹತ್ಯೆಗೆ ಯತ್ನ ಮಾಡಿರುವ ಕುರಿತು ವರದಿಯಾಗಿದೆ. ಈ ಸಂದರ್ಭದಲ್ಲಿ ಮನೆ ಮಂದಿ ಗಮನಿಸಿದ್ದು, ಯುವತಿಯನ್ನು ರಕ್ಷಣೆ ಮಾಡಿದ್ದಾರೆ ಎನ್ನುವ ಸುದ್ದಿ ಹಬ್ಬಿರುವುದಾಗಿ ವರದಿಯಾಗಿದೆ.

ಯುವತಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ.

ತನ್ನ ಸಹಪಾಠಿ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ಮಗು ಕರುಣಿಸಿದ ಯುವಕ ನಂತರ ಮದುವೆಯಾಗಲು ನಿರಾಕರಿಸಿದ ಕಾರಣ ಸಂತ್ರಸ್ತೆ ಕೇಸು ದಾಖಲು ಮಾಡಿದ್ದರು. ಪೊಲೀಸರು ನಂತರ ಯುವಕನ ಬಂಧನ ಮಾಡಿ ಜೈಲಿಗಟ್ಟಿದ್ದರು. ಈ ನಡುವೆ ಸಂತ್ರಸ್ತೆ ಗಂಡು ಮಗುವಿಗೆ ಜನ್ಮ ನೀಡಿದ್ದಳು. 

ಯುವಕ ಎರಡು ತಿಂಗಳ ಕಾಲ ಜೈಲಿನಲ್ಲಿದ್ದು, ನಂತರ ನ್ಯಾಯಾಲಯದಿಂದ ಜಾಮೀನು ಪಡೆದು ಬಿಡುಗಡೆಯಾಗಿದ್ದ. ಯುವಕ-ಯುವತಿ ನಡುವೆ ಮದುವೆ ಮಾಡಲು ವಿವಿಧ ನಾಯಕರು ಪ್ರಯತ್ನ ಪಟ್ಟಿದ್ದರು. ಆದರೆ ಮದುವೆ ನಡೆದಿರಲಿಲ್ಲ.

banner

You may also like