Home » ಶಿಬಾಜೆಯ ಶ್ರೀಧರ್ ಸಂಶಯಾಸ್ಪದ ಸಾವಿನ ಪ್ರಕರಣ: ದೂರುದಾರ ಹರೀಶ್‌ ಮೊಗೇರ ಆತ್ಮಹತ್ಯೆಗೆ ಯತ್ನಿಸಿಲ್ಲ!

ಶಿಬಾಜೆಯ ಶ್ರೀಧರ್ ಸಂಶಯಾಸ್ಪದ ಸಾವಿನ ಪ್ರಕರಣ: ದೂರುದಾರ ಹರೀಶ್‌ ಮೊಗೇರ ಆತ್ಮಹತ್ಯೆಗೆ ಯತ್ನಿಸಿಲ್ಲ!

0 comments
Crime

ಬೆಳ್ತಂಗಡಿ: ಶಿಬಾಜೆಯ ದಲಿತ ಯುವಕ ಶ್ರೀಧ‌ರ್ ಅವರ ಸಂಶಯಾಸ್ಪದ ಸಾವಿನ ಕುರಿತು ಹೈಕೋರ್ಟ್ ಮೆಟ್ಟಿಲೇರಿ ವಿಶೇಷ ತನಿಖಾ ತಂಡದ ರಚನೆಗೆ ಕಾರಣಕರ್ತರಾಗಿರುವ ಹರೀಶ್ ಮೊಗೇರ ಅವರು ಆತ್ಮಹತ್ಯೆಗೆ ಯತ್ನಿಸಿಲ್ಲ. ಬದಲಾಗಿ ಮದ್ಯ ಎಂದು ಭಾವಿಸಿ ಕ್ರಿಮಿನಾಶಕ ಸೇವಿಸಿ ಅಸ್ವಸ್ಥಗೊಂಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿದೆ.

ಪೊಲೀಸರು ನೀಡಿರುವ ಪ್ರಕಟಣೆ ಹೀಗಿದೆ: ದಿನಾಂಕ 11.03.2026ರಂದು ಬೆಳ್ತಂಗಡಿ ಶಿಬಾಜೆ ನಿವಾಸಿ ಹರೀಶ್ ಮುಗೇರ ಎಂಬವರು ಅನಾರೋಗ್ಯಕ್ಕೀಡಾಗಿ ಮಂಗಳೂರಿನ ವೆಸ್ಲಾಕ್ ಆಸ್ಪತ್ರೆಯಲ್ಲಿ ದಾಖಲಾಗಿರುವುದಾಗಿ ವೈದ್ಯಕೀಯ ಸೂಚನಾಪತ್ರ ಬಂದ ಹಿನ್ನೆಲೆಯಲ್ಲಿ, ಸದ್ರಿ ವ್ಯಕ್ತಿಯನ್ನು ವಿಚಾರಿಸಿ, ವಿಡಿಯೋ ಹೇಳಿಕೆ ದಾಖಲಿಸಲಾಗಿದ್ದು, ಅದರಂತೆ, ಸದ್ರಿ ವ್ಯಕ್ತಿಯು ದಿನಾಂಕ 11.03.2026 ರಂದು ಮನೆಯಲ್ಲಿ ತಂದಿರಿಸಿದ್ದ ಮದ್ಯವನ್ನು, ಸೇವಿಸುವುದಕ್ಕಾಗಿ ರಾತ್ರಿ ತೆಗೆಯುವಾಗ ಕಣ್ಣಪ್ಪಿನಿಂದ ಸದ್ರಿ ಮದ್ಯದ ಬಾಟಲಿಯ ಬಳಿಯಿದ್ದ ಕೀಟನಾಶಕವನ್ನು ತೆಗೆದು ಸೇವಿಸಿರುವುದಾಗಿದೆ. ಇದರಿಂದಾಗಿ ಆರೋಗ್ಯದಲ್ಲಿ ಏರುಪೇರಾದಾಗ ತನ್ನ ಪತ್ನಿ ಹಾಗೂ ಜೊತೆಯಲ್ಲಿ ಕೆಲಸ ಮಾಡುತ್ತಿದ್ದವರು ಆಸ್ಪತ್ರೆಗೆ ದಾಖಲಿಸಿರುತ್ತಾರೆ. ತಾನು ಮದ್ಯದ ಬದಲು ಆಕಸ್ಮಿಕವಾಗಿ ಕೀಟನಾಶಕ ಸೇವಿಸಿದ್ದು, ಆದ್ದರಿಂದ ಈ ಬಗ್ಗೆ ಯಾವುದೇ ಕಾನೂನು ಕ್ರಮದ ಅಗತ್ಯವಿರುವುದಿಲ್ಲ ಎಂಬುದಾಗಿ ಹೇಳಿಕೆ ನೀಡಿರುತ್ತಾರೆ. ಈ ಬಗ್ಗೆ ಇನ್ನಷ್ಟು ಹೆಚ್ಚಿನ ವಿಚಾರಣೆ ನಡೆಸುವ ಸಲುವಾಗಿ, ಸದ್ರಿ ವ್ಯಕ್ತಿಗೆ ತಜ್ಞರಿಂದ ಆಪ್ತ ಸಮಾಲೋಚನೆ ನಡೆಸುವಂತೆ, ಜಿಲ್ಲಾ ವೈದ್ಯಾಧಿಕಾರಿಯವರಿಗೆ ಕೊರಲಾಗಿರುತ್ತದೆ. ಆತನ ಮುಂದಿನ ಹೇಳಿಕೆಯ ಬಳಿಕ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

You may also like