Home » ಶಿವಮೊಗ್ಗ: ಬೆಕ್ಕುಗಳ ಜಗಳಕ್ಕೆ ನೆರೆಮನೆಯವರ ಹೊಡೆದಾಟ, 20 ಮಂದಿ ವಿರುದ್ಧ ಕೇಸ್‌

ಶಿವಮೊಗ್ಗ: ಬೆಕ್ಕುಗಳ ಜಗಳಕ್ಕೆ ನೆರೆಮನೆಯವರ ಹೊಡೆದಾಟ, 20 ಮಂದಿ ವಿರುದ್ಧ ಕೇಸ್‌

0 comments
Cat

ತೀರ್ಥಹಳ್ಳಿ, ಜೂ.4: ಬೆಕ್ಕುಗಳ ನಡುವೆ ಜಗಳವಾಗಿದ್ದಕ್ಕೆ ಅಕ್ಕಪಕ್ಕದ ಮನೆಯವರು ಹೊಡೆದಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮೇಗರವಳ್ಳಿಯಲ್ಲಿ ನಡೆದಿದೆ.

ನಾಗಪಾತ್ರಿ ರಾಜಶೇಖರ್‌ ಅವರಿಗೆ ಸೇರಿದ್ದ ವಿದೇಶಿ ಬೆಕ್ಕಿಗೆ ನಾಗರಾಜ ಅವರ ಮನೆಯ ಬೆಕ್ಕು ಕಚ್ಚಿದ್ದು, ಈ ವಿಚಾರದಲ್ಲಿ ಎರಡು ಮನೆಯವರ ನಡುವೆ ಮಾತಿನ ಚಕಮಕಿ ನಡೆದು, ಜಗಳವಾಗಿದೆ. ಈ ಜಗಳದಲ್ಲಿ ನಾಗಪಾತ್ರಿ ರಾಜಶೇಖರ್‌ ಮತ್ತು ನೆರೆಮನೆಯ ಮೇಘನಾ ಎಂಬ ಯುವತಿಗೆ ಪೆಟ್ಟು ಬಿದ್ದಿದ್ದು, ಇಬ್ಬರನ್ನೂ ಪಟ್ಟಣದ ಜೆಸಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಕುರಿತು 20 ಜನರ ವಿರುದ್ಧ ದೂರು ದಾಖಲಾಗಿದೆ.

ನಾಗಪಾತ್ರಿ ರಾಜಶೇಖರ ಅವರು 16 ಜನರ ವಿರುದ್ಧ ದೂರನ್ನು ನೀಡಿದ್ದಾರೆ. ಪ್ರತಿಯಾಗಿ ನಾಗರಾಜ ಅವರೂ 4 ಮಂದಿ ವಿರುದ್ಧ ದೂರು ನೀಡಿದ್ದಾರೆ. ನಾಗರಾಜ ಅವರನ್ನು ಪೊಲೀಸರು ಬಂಧನ ಮಾಡಿದ್ದು, ಉಳಿದವರು ತಪ್ಪಿಸಿಕೊಂಡಿದ್ದಾರೆ. ಎರಡೂ ಮನೆಯವರ ವಿರುದ್ಧ ಆಗುಂಬೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

You may also like