

ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಪ್ರಯಾಣಿಸುತ್ತಿದ್ದ ವಂದೇ ಭಾರತ್ ರೈಲಿನ ಮೇಲೆ ಕೌಡಾ ಗ್ರಾಮದ ಬಳಿ ಕಲ್ಲು ತೂರಾಟ ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ರೈಲು ದೆಹಲಿ ಕಡೆಗೆ ಹೋಗುತ್ತಿದ್ದಾಗ ಮಧ್ಯಾಹ್ನ 3.20 ರ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಅವರು ತಿಳಿಸಿದ್ದಾರೆ.
ಕಲ್ಲು ತೂರಾಟದಿಂದಾಗಿ ರೈಲಿನ ಕಿಟಕಿ ಗಾಜು ಬಿರುಕು ಬಿಟ್ಟಿದೆ ಎಂದು ರೈಲ್ವೆ ಮೂಲಗಳು ತಿಳಿಸಿವೆ.
8 ರಿಂದ 13 ವರ್ಷದೊಳಗಿನ ಕೆಲವು ಮಕ್ಕಳು ರೈಲ್ವೆ ಹಳಿಯ ಬಳಿ ಕ್ರಿಕೆಟ್ ಆಡುತ್ತಿದ್ದರು ಮತ್ತು ಹಾದುಹೋಗುವ ರೈಲಿನ ಮೇಲೆ ಕಲ್ಲು ತೂರಿರಬಹುದು ಎಂದು ಪ್ರಾಥಮಿಕ ಮಾಹಿತಿಯ ಪ್ರಕಾರ ಸರ್ಕಲ್ ಆಫೀಸರ್ (ನಗರ) ಅಂಕಿತ್ ಮಿಶ್ರಾ ಹೇಳಿದ್ದಾರೆ. “ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ” ಎಂದು ಅವರು ಹೇಳಿದರು.