Home » ಸುದೀಪ್‌ ರೈ ಆತ್ಮಹತ್ಯೆ ಪ್ರಕರಣ: ಪತ್ನಿ ಸೌಮ್ಯ ಶೆಟ್ಟಿ ಬಂಧನ ಮಾಡಿದ ಕಾರ್ಕಳ ಪೊಲೀಸರು

ಸುದೀಪ್‌ ರೈ ಆತ್ಮಹತ್ಯೆ ಪ್ರಕರಣ: ಪತ್ನಿ ಸೌಮ್ಯ ಶೆಟ್ಟಿ ಬಂಧನ ಮಾಡಿದ ಕಾರ್ಕಳ ಪೊಲೀಸರು

0 comments

ಉಡುಪಿ: ನೆಲ್ಯಾಡಿ ನಿವಾಸಿ ಸುದೀಪ್‌ ರೈ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅವರ ಪತ್ನಿ ಕಾರ್ಕಳ ತಾಲೂಕಿನ ಕಜೆ ನಿವಾಸಿ ಸೌಮ್ಯ ಶೆಟ್ಟಿ (28) ಅವರನ್ನು ಕಾರ್ಕಳ ಪೊಲೀಸರು ಶನಿವಾರ ಸಂಜೆ ಬಂಧನ ಮಾಡಿದ್ದಾರೆ.

ಸುದೀಪ್‌ ರೈ ಅವರು ಮಾ.17 ರಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ ಮಾಡಿದ್ದರು. ಮೊದಲಿಗೆ ಇವರನ್ನು ಕಾರ್ಕಳ ಆಸ್ಪತ್ರೆಗೆ ದಾಖಲು ಮಾಡಿದ್ದು, ನಾಲ್ಕು ದಿನಗಳ ಬಳಿಕ ಮಂಗಳೂರು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಅಷ್ಟರಲ್ಲಿ ಸ್ಥಿತಿ ಉಲ್ಭಣಗೊಂಡಿದ್ದು, ಮಾ.29 ರಂದು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದರು. ತನಿಖೆ ಸಂದರ್ಭ ಫೆ.17 ರಂದು ಪುತ್ತೂರು ಉಪನೋಂದಣಿ ಕಚೇರಿಯಲ್ಲಿ ಮನೆ ಮಂದಿಗೆ ತಿಳಿಸದೆ ಸೌಮ್ಯ ಶೆಟ್ಟಿ ಜೊತೆಗೆ ವಿವಾಹ ನೋಂದಣಿ ಮಾಡಿದ್ದರು ಎಂದು ತಿಳಿದು ಬಂದಿತ್ತು. ನಂತರ ಕಾರ್ಕಳದಲ್ಲಿ ಜೊತೆಗಿದ್ದ ಸಂದರ್ಭದಲ್ಲಿಯೇ ವಿಷ ಸೇವನೆಯಾಗಿತ್ತು.

ಮಗನ ಸಾವಿನ ಕುರಿತು ಸಂಶಯ ವ್ಯಕ್ತಪಡಿಸಿ ತಂದೆ ದಾಮೋದರ ರೈ ಕಾರ್ಕಳ ನಗರ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು. ಆಕೆಯ ಕಿರುಕುಳದಿಂದಲೇ ಮಗನ ಸಾವಾಗಿದೆ ಎಂದು ಆರೋಪ ಮಾಡಿದ್ದರು. ಆತ್ಮಹತ್ಯೆ ಪ್ರಚೋದನೆ ಶಂಕೆಯ ಮೇರೆಗೆ ಪೊಲೀಸರು ತನಿಖೆ ಕೈಗೊಂಡಿದ್ದು, ಸಾಕ್ಷ್ಯಾಧಾರಗಳ ಆಧಾರದ ಮೇಲೆ ಪೊಲೀಸರು ಆರೋಪಿ ಮಹಿಳೆಯನ್ನು ಬಂಧನ ಮಾಡಿದ್ದಾರೆ.

ಪ್ರಾಥಮಿಕ ಸಾಕ್ಷ್ಯಗಳ ಆಧಾರದ ಮೇರೆಗೆ ಸೌಮ್ಯಶೆಟ್ಟಿಯನ್ನು ಬಂಧನ ಮಾಡಲಾಗಿದೆ ಎಂದು ಎಸ್ಪಿ ಹರಿರಾಮ್‌ ತಿಳಿಸಿದ್ದಾರೆ. ಸುದೀಪ್‌ ಸಾವಿನ ನಂತರ ಸೌಮ್ಯ ಶೆಟ್ಟಿ ಕುರಿತು ಹಲವು ಆರೋಪ ಬಂದಿತ್ತು. ಸೌಮ್ಯ ಮಾಜಿ ಪ್ರಿಯಕರ ವೇಣು, ಸುದೀಪ್‌ ತಂದೆ ಹಲವು ಆರೋಪಗಳನ್ನು ಮಾಡಿದ್ದರು.

banner

You may also like