

ಮಂಗಳೂರು: ಸುರತ್ಕಲ್ ಬಳಿಯ ಮುಕ್ಕದಾ ಕಾಲೇಜ್ನಲ್ಲಿ ಓದುತ್ತಿರುವ ಕ್ರಿಮಿನಾಲಜಿ ಪದವಿ ವಿದ್ಯಾರ್ಥಿನಿ ವೈಶಾಲಿ ಮೂಲತಃ ಕೇರಳದ ಕಾಸರಗೋಡು ಜಿಲ್ಲೆಯವರಾಗಿದ್ದು, ಈಕೆ ಮೊಹಮ್ಮದ್ ವಿದ್ಲಾಜ್ ಪಿ.ಹೆಚ್ ಎನ್ನುವಾತನನ್ನು ಮದುವೆಯಾಗಿರುವ ಘಟನೆ ನಡೆದಿದೆ. ಕೇರಳದ ವಯನಾಡಿನ ಮೂಲದವರಾದ ಈತ ಸುರತ್ಕಲ್ನ ಜ್ಯುವೆಲ್ಲರಿ ಒಂದರಲ್ಲಿ ಕೆಲಸ ಮಾಡುತ್ತಿದ್ದ. ಇವರಿಬ್ಬರು ಜ.31 ರಂದು ವಯನಾಡಿನ ರಿಜಿಸ್ಟರ್ ಕಚೇರಿಯಲ್ಲಿ ಮದುವೆಯಾಗಿರುವ ಕುರಿತು ಸಾಮಾಜಿಕ ಜಾಲತಾಣದ ಮೂಲಕ ವೈಶಾಲಿ ಮನೆಯವರಿಗೆ ತಿಳಿದು ಬಂದಿದೆ.
ರಿಜಿಸ್ಟರ್ ಮ್ಯಾರೇಜ್ ವಿಚಾರ ತನ್ನ ಪೋಷಕರಿಗೆ ಗೊತ್ತಾಗಿರುವುದು ವೈಶಾಲಿಗೆ ಗೊತ್ತಾಗುತ್ತಿದ್ದಂತೆ ಫೆಬ್ರವರಿ 9 ರಂದು ತಾನು ವಾಸವಾಗಿದ್ದ ಸುರತ್ಕಲ್ ಪಿಜಿಯಿಂದ ಪರಾರಿಯಾಗಿದ್ದಾಳೆ. ಇನ್ನು ವಿಚಾರ ತಿಳಿದ ತಕ್ಷಣ ಆತನ ತಂದೆ ವಿಶ್ವನಾಥ್ ವಿದೇಶದಿಂದ ದೌಡಾಯಿಸಿದ್ದಾರೆ. ಪೋಷಕರು ಸುರತ್ಕಲ್ ಠಾಣೆಗೆ ದೂರು ನೀಡಿದ್ದಾರೆ. ಮಗಳು ಲವ್ ಮಾಡುವವಳಂತವಳಲ್ಲ. ಆಕೆಯ ಬ್ರೈನ್ ವಾಶ್ ಮಾಡಲಾಗಿದೆ. ಆಕೆಗೆ ಬ್ಲಾಕ್ ಮೇಲ್ ಮಾಡಿ, ಬೆದರಿಸಿ ಕರೆದುಕೊಂಡು ಹೋಗಾಲಾಗಿದೆ. ಮುಸ್ಲಿಮರು ಷಡ್ಯಂತ್ರ ಮಾಡಿದ್ದಾರೆ ಅಂತಾ ಪೋಷಕರು ಆರೋಪ ಮಾಡಿದ್ದಾರೆ.
ವಿಶ್ವನಾಥ್ ಮತ್ತು ಲತಾ ದಂಪತಿ ವಯನಾಡು ಠಾಣೆಗೆ ಹೋಗಿ ತಮ್ಮ ಮಗಳನ್ನು ಭೇಟಿಯಾಗಿದ್ದು, ಆಗ ಮಗಳು ʼ ನಾನು ನಿಮ್ಮ ಜೊತೆ ಬರುತ್ತೇನೆʼ ಎಂದು ಹೇಳಿದ್ದಳಂತೆ. ಅದೇ ರೀತಿ ಮುಚ್ಚಳಿಕೆ ಬರೆದುಕೊಟ್ಟಳಂತೆ. ಆದರೆ ವಯನಾಡು ಪೊಲೀಸರು ಮಗಳ ಜೊತೆ ಮಾತನಾಡಲು ಐದು ನಿಮಿಷ ಕಾಲಾವಕಾಶ ನೀಡಿದ್ದರು. ಆ ಹುಡುಗನಿಗೆ ಹೆಚ್ಚು ಸಮಯ ನೀಡಿದ್ದಾರೆ. ಪೊಲೀಸರು ಕೂಡಾ ಆ ಹುಡುಗನ ಪರ ವಹಿಸಿದರು. ಆಗ ಬರೆದುಕೊಟ್ಟ ಮುಚ್ಚಳಿಕೆಯನ್ನು ಹರಿದು ಮತ್ತೆ ಬೇರೆ ಬರೆದುಕೊಟ್ಟಿದ್ದಾಳೆ ಎಂದು ಪೋಷಕರು ಕಣ್ಣೀರಿಟ್ಟರು.
ಕೇರಳ ಪೊಲೀಸರು ಹುಡುಗನ ಕಡೆ ಶ್ಯಾಮೀಲಾಗಿದ್ದಾರೆ. ನೀವು ನಮಗೆ ನ್ಯಾಯ ದೊರಕಿಸಿಕೊಡಿ ಅಂತಾ ಪೋಷಕರು ಸುರತ್ಕಲ್ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.













