Home » ವಿಟ್ಲ: ಕೆಎಸ್‌ಆರ್‌ಟಿಸಿ ಬಸ್‌-ಟಿಪ್ಪರ್‌ ಲಾರಿ ಅಪಘಾತ; ಹಲ್ಲೆ ಆರೋಪ, ಇಬ್ಬರು ಆಸ್ಪತ್ರೆಗೆ ದಾಖಲು

ವಿಟ್ಲ: ಕೆಎಸ್‌ಆರ್‌ಟಿಸಿ ಬಸ್‌-ಟಿಪ್ಪರ್‌ ಲಾರಿ ಅಪಘಾತ; ಹಲ್ಲೆ ಆರೋಪ, ಇಬ್ಬರು ಆಸ್ಪತ್ರೆಗೆ ದಾಖಲು

0 comments

ವಿಟ್ಲ: ಪೆರುವಾಯಿ ಸಮೀಪದ ಮುಳಿಯ ಎಂಬಲ್ಲಿ ಕೆಎಸ್‌ಆರ್‌ಟಿಸಿ ಬಸ್‌ ಹಾಗೂ ಟಿಪ್ಪರ್‌ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅಪಘಾತದ ನಂತರ ಚಾಲಕರ ನಡುವೆ ಮಾತಿನ ಚಕಮಕಿ ನಡೆದಿದ್ದು, ಪರಸ್ಪರ ಹಲ್ಲೆಯಾದ ಘಟನೆ ಕುರಿತು ವರದಿಯಾಗಿದೆ.

ಪಕಳಕುಂಜದಿಂದ ವಿಟ್ಲಕ್ಕೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ ಹಾಗೂ ಪೆರುವಾಯಿ ಕಡೆಗೆ ಹೋಗುತ್ತಿದ್ದ ಟಿಪ್ಪರ್‌ ಲಾರಿ ನಡುವೆ ಈ ಅಪಘಾತ ನಡೆದಿದೆ. ಡಿಕ್ಕಿಯ ರಭಸಕ್ಕೆ ಬಸ್ಸು ಟಿಪ್ಪರ್‌ ಲಾರಿಯ ಮುಂಭಾಗ ಜಖಂಗೊಂಡಿದೆ. ಈ ಅಪಘಾತದಲ್ಲಿ ಯಾರೂ ಗಾಯಗೊಂಡಿಲ್ಲ ಎಂದು ವರದಿಯಾಗಿದೆ.

ಅಪಘಾತದ ಬೆನ್ನಲ್ಲೇ ಬಸ್‌ಚಾಲಕ ಮತ್ತು ಟಿಪ್ಪರ್‌ ಚಾಲಕನ ನಡುವೆ ವಾಗ್ವಾದ ನಡೆದಿದೆ. ಈ ವೇಳೆ ಟಿಪ್ಪರ್‌ ಚಾಲಕ ಬಿಲಾಲ್‌ ಎನ್ನುವಾತ ಕರ್ತವ್ಯದಲ್ಲಿದ್ದ ಕೆಎಸ್‌ಆರ್‌ಟಿಸಿ ಬಸ್‌ ಕಂಡಕ್ಟರ್‌ ಪ್ರಶಾಂತ್‌ ಅವರ ಮೇಲೆ ಹಲ್ಲೆ ಮಾಡಿದ್ದಾನೆ ಎಂದು ವರದಿಯಾಗಿದೆ.

ಅದೇ ರೀತಿ ಟಿಪ್ಪರ್‌ ಚಾಲಕನ ಮೇಲೆಯೂ ಕೆಎಸ್‌ಆರ್‌ಟಿಸಿ ಬಸ್ಸು ಕಂಡಕ್ಟರ್‌ ಮತ್ತು ಚಾಲಕ ಹಲ್ಲೆ ನಡೆಸಿದ್ದಾರೆ ಎಂದು ದೂರಲಾಗಿದೆ.

banner

ಹಲ್ಲೆಗೊಳಗಾದ ಬಸ್‌ ಕಂಡಕ್ಟರ್‌ ಪ್ರಶಾಂತ್‌ ಅವರು ವಿಟ್ಲ ಸರಕಾರಿ ಆಸ್ಪತ್ರೆಯಲ್ಲಿಯೂ ಇತ್ತ ಟಿಪ್ಪರ್‌ ಚಾಲಕ ಪುತ್ತೂರು ಮೆಡ್‌ಲ್ಯಾಂಡ್‌ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿರುವುದಾಗಿ ವರದಿಯಾಗಿದೆ.

You may also like