HomeCrimeKerala: ದೆವ್ವ ಬಿಡಿಸೋ ನೆಪದಲ್ಲಿ ಮಹಿಳೆಗೆ ಮದ್ಯ ಸೇವಿಸುವಂತೆ ಕಿರುಕುಳ

Kerala: ದೆವ್ವ ಬಿಡಿಸೋ ನೆಪದಲ್ಲಿ ಮಹಿಳೆಗೆ ಮದ್ಯ ಸೇವಿಸುವಂತೆ ಕಿರುಕುಳ

Hindu neighbor gifts plot of land

Hindu neighbour gifts land to Muslim journalist

Kerala: ಕೇರಳದ (Kerala) ಕೊಟ್ಟಾಯಂನಲ್ಲಿ (Kottayam), ದೆವ್ವ ಬಿಡಿಸೋಕೆ ಮಹಿಳೆಗೆ ಬೀಡಿ ಸೇದಿ, ಮದ್ಯ ಸೇವಿಸುವಂತೆ ದೈಹಿಕ ಹಾಗೂ ಮಾನಸಿಕ ಕಿರುಕುಳ ನೀಡಿರುವ ಘಟನೆ ನಡೆದಿದೆ.ಪ್ರಕರಣ ಸಂಬಂಧ ಮಹಿಳೆಯ ಪತಿ ಅಖಿಲ್ ದಾಸ್ (26), ಪತಿಯ ತಂದೆ ದಾಸ್ (54) ಹಾಗೂ ಮಾಂತ್ರಿಕ ಶಿವದಾಸ್ (54) ಮೂವರನ್ನು ಬಂಧಿಸಲಾಗಿದೆ. ಪೊಲೀಸರ ಮಾಹಿತಿ ಪ್ರಕಾರ, ಕಳೆದ ವಾರ ಮಹಿಳೆಯ ಅತ್ತೆ ಮಾಂತ್ರಿಕನ ಬಳಿ ಹೋಗಿ ತಮ್ಮ ಸೊಸೆಯ ಮೇಲೆ ಮೃತ ಸಂಬಂಧಿಕರ ದೆವ್ವ ಆವರಿಸಿಕೊಂಡಿದೆ ಎಂದು ತಿಳಿಸಿ, ಮಾಟಮಂತ್ರಕ್ಕೆ ವ್ಯವಸ್ಥೆ ಮಾಡಿಸಿದ್ದರು. ಅದರಂತೆ ಬೆಳಗ್ಗೆ 11 ಗಂಟೆಗೆ ಮಾಟಮಂತ್ರ ಆರಂಭವಾಗಿ ರಾತ್ರಿಯವರೆಗೆ ನಡೆದಿದೆ ಎಂದು ತಿಳಿಸಿದ್ದಾರೆ.ಇನ್ನೂ ಈ ಕುರಿತು ಮಹಿಳೆ ಮಾತನಾಡಿ, ಮಾಟಮಂತ್ರ ಮಾಡುವಾಗ ನನಗೆ ಬಲವಂತವಾಗಿ ಮದ್ಯ ಕುಡಿಸಿದರು, ಜೊತೆಗೆ ಬೀಡಿ ಸೇದಿಸಿದರು. ಬೂದಿಯನ್ನು ತಿನ್ನಿಸಿದರು. ನನ್ನ ಮೇಲೆ ಸುಟ್ಟ ಗಾಯಗಳನ್ನು ಮಾಡಿ, ದೈಹಿಕವಾಗಿ ಚಿತ್ರಹಿಂಸೆ ನೀಡಿದರು. ಕೊನೆಗೆ ನಾನು ಪ್ರಜ್ಞೆ ಕಳೆದುಕೊಂಡೆ ಎಂದು ತಿಳಿಸಿದ್ದಾರೆ.ಈ ಕುರಿತು ಮಹಿಳೆಯ ತಂದೆ ದೂರು ನೀಡಿದ್ದು, ದೂರಿನ ಆಧಾರದ ಮೇಲೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ದೂರು ದಾಖಲಾಗುತ್ತಿದ್ದಂತೆ ಪ್ರಮುಖ ಆರೋಪಿ ಮಾಂತ್ರಿಕ ಫೋನ್ ಸ್ವಿಚ್ ಆಫ್ ಮಾಡಿ, ಪರಾರಿಯಾಗಿದ್ದ. ಕೊನೆಗೆ ಮಾಂತ್ರಿಕನನ್ನು ಪೊಲೀಸರು ತಿರುವಲ್ಲಾದ ಮುತ್ತೂರು ಪ್ರದೇಶದಲ್ಲಿ ಅರೆಸ್ಟ್ ಮಾಡಿದ್ದಾರೆ. ಸದ್ಯ ಮಹಿಳೆಯ ಅತ್ತೆ ತಲೆಮರೆಸಿಕೊಂಡಿದ್ದು, ಅವರ ಪತ್ತೆಗಾಗಿ ತನಿಖೆ ಮುಂದುವರೆದಿದೆ.

RELATED ARTICLES

Most Popular

Recent Comments