Home » ಬೆಂಗಳೂರು; ಮೊಬೈಲ್‌ ಕಸಿದು ಪರಾರಿಯಾಗುತ್ತಿದ್ದ ಕಳ್ಳನಿಗೆ ಹೃದಯಾಘಾತ, ಸಾವು

ಬೆಂಗಳೂರು; ಮೊಬೈಲ್‌ ಕಸಿದು ಪರಾರಿಯಾಗುತ್ತಿದ್ದ ಕಳ್ಳನಿಗೆ ಹೃದಯಾಘಾತ, ಸಾವು

0 comments

ಬೆಂಗಳೂರು: ನಗರದ ಕಬ್ಬನ್‌ಪೇಟೆ ಪ್ರದೇಶದಲ್ಲಿ ಮೊಬೈಲ್‌ ಕಸಿದುಕೊಂಡು ಪರಾರಿಯಾಗುತ್ತಿದ್ದ ಕಳ್ಳನೋರ್ವ ಹೃದಯಾಘಾತಕ್ಕೊಳಗಾಗಿ ಸ್ಥಳದಲ್ಲಿಯೇ ಸಾವಿಗೀಡಾಗಿರುವ ಘಟನೆ ನಡೆದಿದೆ.

ಜನರಿಂದ ತಪ್ಪಿಸಿಕೊಳ್ಳಲೆಂದು ವೇಗವಾಗಿ ಓಡುತ್ತಿದ್ದ ಜುನೈದ್‌ ಕುಸಿದು ಬಿದ್ದಿದ್ದು, ಕೂಡಲೇ ಸ್ಥಳದಲ್ಲಿದ್ದವರು ಹಾಗೂ ಪೊಲೀಸರು ಆತನನ್ನು ಆಸ್ಪತ್ರೆಗೆ ಸಾಗಿಸಲು ಮುಂದಾದರೂ, ಅಷ್ಟರಲ್ಲಿ ಆತ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.

ಪ್ರಾಥಮಿಕ ಮಾಹಿತಿಯ ಅನುಸಾರ, ವೇಗದ ಓಟ, ಆತಂಕದ ನಡುವೆ ಜುನೈದ್‌ಗೆ ಹೃದಯಾಘಾತ ಸಂಭವಿಸಿದ್ದು, ಇದರಿಂದ ಸಾವಾಗಿದೆ ಎಂದು ಶಂಕೆ ವ್ಯಕ್ತವಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಲಾಗಿದ್ದು, ವರದಿ ಬಂದ ನಂತರ ಸಾವಿನ ನಿಖರ ಕಾರಣ ತಿಳಿಯಲಿದೆ. ಈ ಕುರಿತು ಕಬ್ಬನ್‌ಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

You may also like