Home » 50 ಬಾರಿ ಪ್ರಯತ್ನಿಸಿದರು ಸಿಗದ ಸರ್ಕಾರಿ ಕೆಲಸ- ಎಂಜಿನಿಯರಿಂಗ್‌ ಗೋಲ್ಡ್‌ ಮೆಡಲಿಸ್ಟ್ ವಿದ್ಯಾರ್ಥಿ ಆತ್ಮಹತ್ಯೆ

50 ಬಾರಿ ಪ್ರಯತ್ನಿಸಿದರು ಸಿಗದ ಸರ್ಕಾರಿ ಕೆಲಸ- ಎಂಜಿನಿಯರಿಂಗ್‌ ಗೋಲ್ಡ್‌ ಮೆಡಲಿಸ್ಟ್ ವಿದ್ಯಾರ್ಥಿ ಆತ್ಮಹತ್ಯೆ

0 comments

ನಿರಂತರವಾಗಿ 50 ಬಾರಿ ಪ್ರಯತ್ನಿಸಿದರೂ ಸರ್ಕಾರಿ ಉದ್ಯೋಗ ಸಿಗದ ಹಿನ್ನೆಲೆಯಲ್ಲಿ ಬಿ.ಟೆಕ್‌ನಲ್ಲಿ ಚಿನ್ನದ ಪದಕ ಪಡೆದ 23 ವರ್ಷದ ಪ್ರತಿಭಾವಂತ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾದ ಹೃದಯ ವಿದ್ರಾವಕ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಆನಂದ್‌ ಎಂದು ಗುರುತಿಸಲಾಗಿದೆ.

ಮೃತನನ್ನು 23 ವರ್ಷದ ಆನಂದ್ ಕುಮಾರ್ ಎಂದು ಗುರುತಿಸಲಾಗಿದೆ. ಈತ ಕಾನ್ಪುರದ ಪ್ರಸಿದ್ಧ ಪ್ರಣವೀರ್ ಸಿಂಗ್ ಇನ್​ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನಲ್ಲಿ 2024ನೇ ಸಾಲಿನ ಬಿಟೆಕ್ ವಿಭಾಗದಲ್ಲಿ ಟಾಪರ್ ಆಗಿದ್ದ ಹಾಗೂ ಇಡೀ ಉತ್ತರ ಪ್ರದೇಶದಕ್ಕೆ 3ನೇ ರ‍್ಯಾಂಕ್ ಗಳಿಸಿದ್ದ. ಕಾಲೇಜು ಘಟಿಕೋತ್ಸವದಲ್ಲಿ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರ ಕೈಯಿಂದಲೇ ಈತ ಚಿನ್ನದ ಪದಕ ಪಡೆದುಕೊಂಡಿದ್ದ. ಆದರೆ ಸರ್ಕಾರಿ ಕೆಲಸಕ್ಕಾಗಿ ಅಲೆದಾಅಡಿ ಸುಸ್ತಾದ ಯುವಕ ಈಗ ದುಡುಕಿನ ನಿರ್ಧಾರ ಕೈಗೊಂಡಿದ್ದಾನೆ. 

ಸದ್ಯ ಈ ಆತ್ಮಹತ್ಯೆ ಪ್ರಕರಣ ದೇಶಾದ್ಯಂತ ಸಂಚಲನ ಸೃಷ್ಟಿಸಿದ್ದು, ಅನೇಕರು ಮರುಗಿದ್ದಾರೆ. ಶೈಕ್ಷಣಿಕವಾಗಿ ಪ್ರತಿಭಾವಂತ ವಿದ್ಯಾರ್ಥಿಯಾಗಿದ್ದ ಆನಂದ್‌ ಉತ್ತರ ಪ್ರದೇಶದ ಖಾಸಗಿ ಎಂಜನಿಯರಿಂಗ್‌ ಕಾಲೇಜಿನಲ್ಲಿ ಉತ್ತಮ ಅಂಕಗಳೊಂದಿಗೆ ಎಲೆಕ್ಟ್ರಿಕಲ್‌ ಎಂಜಿನಿಯರಿಂಗ್‌ ಪ್ರೋಗ್ರಾಂನಲ್ಲಿ 2024ರಲ್ಲಿ ಬಿ.ಟೆಕ್‌ ಪೂರೈಸಿದ್ದರು. ಅಲ್ಲದೆ ಇಡೀ ರಾಜ್ಯಕ್ಕೆ ಎಂಜಿನಿಯರಿಂಗ್‌ನಲ್ಲಿ 3ನೇ ರ‍್ಯಾಂಕ್‌ ಗಳಿಸಿದ್ದರು. ಅದೇ ವರ್ಷ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಆನಂದ್‌ಗೆ ಚಿನ್ನದ ಪದಕ ವಿತರಿಸಲಾಗಿತ್ತು. ಆದರೆ ಇದೀಗ ಆತ್ಮಹತ್ಯೆ ಮಾಡಿಕೊಂಡಿರುವುದು ಆಘಾತಕ್ಕೆ ಕಾರಣವಾಗಿದೆ.

ಇನ್ನೂ ಆತ್ಮಹತ್ಯೆಯ ಸ್ಥಳದಲ್ಲಿ ಡೆತ್ ನೋಟ್ ಪತ್ತೆಯಾಗಿದ್ದು ಅದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಅದರಲ್ಲಿ ʼʼಸಾರಿ ಪಪ್ಪ. ನಾನು ಸರ್ಕಾರಿ ಕೆಲಸಕ್ಕಾಗಿ 50 ಬಾರಿ ಪ್ರಯತ್ನಿಸಿದೆ. ಆದರೆ ವಿಫಲನಾದೆ. ದಯವಿಟ್ಟು ನನ್ನನ್ನು ಕ್ಷಮಿಸಿʼʼ ಎಂದು ಬರೆದುಕೊಂಡಿದ್ದಾರೆ.

banner

You may also like