ಮಡಿಕೇರಿ: ಕೊಡಗಿನ ಸೋಮವಾರಪೇಟೆಯ ಹೋಂಸ್ಟೇ ಒಂದರಲ್ಲಿ ಗ್ಯಾಸ್ ಸೋರಿಕೆಯಿಂದಾಗಿ ಮೈಸೂರಿನ ಯುವತಿ ಮೃತಪಟ್ಟಿರುವ ಘಟನೆ ನಡೆದಿದೆ. ಮೈಸೂರಿನ ಯರಗನಹಳ್ಳಿಯ ಪಾಪಣ್ಣ ಬಡಾವಣೆಯ ನಿವಾಸಿ ಜಗನ್ನಾಥ್ ಹಾಗೂ ರೇಣುಕಾ ದಂಪತಿಯ ಪುತ್ರಿ ವಿನೂತ (27) ಮೃತ ಮಹಿಳೆ.


ಕೊಡಗಿಗೆ ಪ್ರವಾಸ ಬಂದಿದ್ದ ಇವರು ಸೋಮವಾರಪೇಟೆಯ ಚೌಡ್ಲು ಗ್ರಾಮದ ಹೋಂ ಸ್ಟೇ ಅಲ್ಲಿ ತಂಗಿದ್ದು, ಮರುದಿನ ಬೆಳಗ್ಗೆ ಸ್ನಾನ ಮಾಡಲೆಂದು ಬಾತ್ರೂಂಗೆ ತೆರಳಿದ್ದ ಸಂದರ್ಭದಲ್ಲಿ ಗ್ಯಾಸ್ಗೀಸರ್ ಸೋರಿಕೆಯಾಗಿ ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾರೆ.
ಬಾತ್ರೂಂನಲ್ಲಿ ಕಿಟಕಿ ಇರಲಿಲ್ಲವೆಂದು ಹೇಳಲಾಗಿದೆ. ಘಟನೆಗೆ ಸಂಬಂಧ ಸೋಮವಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
