

ಮಡಿಕೇರಿ: ಕಾಡಾನೆ ದಾಳಿಗೆ 17 ವರ್ಷದ ಪಿಯುಸಿ ವಿದ್ಯಾರ್ಥಿನಿ ಸಾವಿಗೀಡಾದ ಘಟನೆ ಕೊಡಗು ಜಿಲ್ಲೆಯ ಬೆಟ್ಟತ್ತೂರು ಗ್ರಾಮದಲ್ಲಿ ನಡೆದಿದೆ. ಪೂಜಾ (17) ಮೃತ ವಿದ್ಯಾರ್ಥಿನಿ.
ಶನಿವಾರ ಸಂಜೆ ಈ ಘಟನೆ ನಡೆದಿದೆ. ಮಡಿಕೇರಿಯ ಸಂತ ಮೈಕಲರ ಶಾಲೆಯ ಪ್ರಥಮ ಪಿಯುಸಿ ಕಲಿಯುತ್ತಿದ್ದ ಪೂಜಾ ನಿನ್ನೆ ಸಂಜೆ ಕಾಲೇಜು ಮುಗಿಸಿ ಬೆಟ್ಟತ್ತೂರಿನ ತನ್ನ ಮನೆಗೆ ಬಸ್ಸಿನಲ್ಲಿ ಇಳಿದು ನಡೆದು ಹೋಗುವಾಗ ಏಕಾಏಕಿ ಆನೆ ದಾಳಿ ಮಾಡಿದೆ. ಪೂಜಾ ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾಳೆ.
ಗ್ರಾಮಸ್ಥರು ಆನೆಯ ಈ ಕೃತ್ಯಕ್ಕೆ ಅರಣ್ಯ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪರಿಹಾರ ಕೊಡಲು ಒತ್ತಾಯ ಮಾಡಿದ್ದು, ಕಾಡಾನೆ ಸೆರೆಹಿಡಿಯಲು ಆಗ್ರಹ ಮಾಡಿದ್ದಾರೆ.