Home » ಹುತ್ತಕ್ಕೆ ಕೈ ಹಾಕಿ ಜೇನು ತೆಗೆಯುವ ವೇಳೆ ವಿಷ ಜಂತು ಕಚ್ಚಿದ ಶಂಕೆ : ಚಿಕಿತ್ಸೆ ಪಡೆಯದೆ ವ್ಯಕ್ತಿ ಮೃತ್ಯು

ಹುತ್ತಕ್ಕೆ ಕೈ ಹಾಕಿ ಜೇನು ತೆಗೆಯುವ ವೇಳೆ ವಿಷ ಜಂತು ಕಚ್ಚಿದ ಶಂಕೆ : ಚಿಕಿತ್ಸೆ ಪಡೆಯದೆ ವ್ಯಕ್ತಿ ಮೃತ್ಯು

0 comments

ಬೆಳ್ತಂಗಡಿ: ಬಡಗಕಾರಂದೂರು ಗ್ರಾಮದ ಅರ್ಕಿಜಡ್ಡ ನಿವಾಸಿ ಕೃಷ್ಣಪ್ಪ ಮೂಲ್ಯ (63ವ) ರವರವರು ಹುತ್ತದಿಂದ ಕೈ ಹಾಕಿ ಜೇನು ತೆಗೆಯುವಾಗ ಯಾವುದೋ ವಿಷಜಂತು ಕಚ್ಚಿ, ಚಿಕಿತ್ಸೆ ಪಡೆಯದೆ ಎ.2 ರಂದು ಮೃತಪಟ್ಟ ಘಟನೆ ನಡೆದಿದೆ.

ಕೃಷ್ಣಪ್ಪ ಮೂಲ್ಯರವರ ಪತ್ನಿ ಮೃತಪಟ್ಟಿದ್ದು, ಅವರ ಮಕ್ಕಳು ಸುಮಾರು 15 ವರ್ಷಗಳ ಹಿಂದೆ ಕೃಷ್ಣಪ್ಪ ಮೂಲ್ಯ ರವರನ್ನು ಬಿಟ್ಟ ಹೋಗಿದ್ದು, ತದನಂತರ ಕೃಷ್ಣಪ್ಪ ಮೂಲ್ಯ, ಎಂಬವರು ಒಬ್ಬಂಟಿಯಾಗಿ ಬಡಗಕಾರಂದೂರು ಗ್ರಾಮದ ಅರ್ಕಿಜಡ್ಡ ಎಂಬಲ್ಲಿ ವಾಸವಾಗಿದ್ದರು. ಕೃಷ್ಣಪ್ಪ ಮೂಲ್ಯ ರವರ ತಂಗಿ ಶ್ರೀಮತಿ ಮುತ್ತಮ್ಮ ಎಂಬವರು ಕೃಷ್ಣಪ್ಪ ಮೂಲ್ಯರಿಗೆ ಪ್ರತಿದಿನ ಊಟ ತಿಂಡಿ ಕೊಟ್ಟು ಬರುತ್ತಿದ್ದು, ಇತ್ತೀಚೆಗೆ ಸುಮಾರು 15 ದಿನಗಳ ಹಿಂದೆ ಕೃಷ್ಣಪ್ಪ ಮೂಲ್ಯ ರವರು ಹುತ್ತಕ್ಕೆ ಕೈ ಹಾಕಿ ಜೇನು ತೆಗೆಯುವ ಸಮಯ ಎಡಕೈಗೆ ಏನೋ ಕಚ್ಚಿದ ಗಾಯವಾಗಿ ಕೈ ಬಾತುಕೊಂಡಿದ್ದು ಚಿಕಿತ್ಸೆ ಪಡೆದುಕೊಳ್ಳಲು ನಿರಾಕರಿಸಿದ್ದು, ಅವರು ಎ.2ರಂದು ಮನೆಯಲ್ಲೇ ಮೃತಪಟ್ಟಿದ್ದಾರೆ. ಹುತ್ತಕ್ಕೆ ಕೈ ಹಾಕಿ ಜೇನು ತೆಗೆಯುವಾಗ ಯಾವುದೋ ವಿಷಜಂತು ಹೆಚ್ಚಿರಬಹುದು ಎಂಬ ಶಂಕೆ ಉಂಟಾಗಿದೆ ಅಥವಾ ಇನ್ಯಾವುದೋ ಕಾರಣದಿಂದ ಅವರು ಮೃತಪಟ್ಟಿದ್ದಾರೆ.

ಈ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

You may also like