ವಿಟ್ಲ: ಕರ್ತವ್ಯದಲ್ಲಿದ್ದಾಗಲೇ ಮೆಸ್ಕಾಂ ಉದ್ಯೋಗಿ ಹೃದಯಾಘಾತದಿಂದ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ಸಮೀಪದ ಶಂಭೂರು ಎಂಬಲ್ಲಿ ನಡೆದಿದೆ.


ಮೂಲತಃ ಮಿತ್ತೂರು ನಿವಾಸಿ ಚಂದ್ರಶೇಖರ ನಾಯ್ಕ (55 ವ.) ಮೃತ ದುರ್ದೈವಿ. ಅವರು ಮೆಸ್ಕಾಂ ಪಾಣೆಮಂಗಳೂರು ಶಾಖೆಯಲ್ಲಿ ಸಹಾಯಕ ಮೆಕ್ಯಾನಿಕ್ ಹುದ್ದೆ ನಿರ್ವಹಿಸುತ್ತಿದ್ದರು.
ಜೂ.10ರಂದು ಮಧ್ಯಾಹ್ನ ವೇಳೆ ಶಂಭೂರು ಸಮೀಪದ ಕುಂದಾಯಗೋಳಿ ಎಂಬಲ್ಲಿ ವಿದ್ಯುತ್ ಕಂಬವೊಂದು ತುಂಡಾಗಿ ಬಿದ್ದು ವಿದ್ಯುತ್ ಸಂಪರ್ಕಕಡಿತಗೊಂಡಿರುವ ಹಿನ್ನೆಲೆಯಲ್ಲಿ ಕಂಬವನ್ನು ಅಳವಡಿಸಿ ವಿದ್ಯುತ್ ತಂತಿಗಳನ್ನು ಎಳೆದು ಸಂಪರ್ಕ ನೀಡಿದ್ದರು.
