ಕಳೆದ ವರ್ಷದ ಐಪಿಎಲ್ ಆವೃತ್ತಿಯಲ್ಲಿ ಆರ್ಸಿಬಿ ಟೀಮ್ ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಅಭಿಮಾನಿಗಳು ಆಚರಿಸಿದ ವಿಜಯೋತ್ಸವದ ವೇಳೆ 11 ಮಂದಿ ಕಾಲ್ತುಳಿತದಲ್ಲಿ ಮೃತಪಟ್ಟ ಘಟನೆ ನಡೆದಿತ್ತು. ಈ ಘಟನೆ ಇನ್ನು ಜನಮಾನಸದಿಂದ ಅಳಿಸಿ ಹೋಗಿಲ್ಲ. ಈ ವರ್ಷವೂ ಕೂಡ ಆರ್ಸಿಬಿ ಚಾಂಪಿಯನ್ಶಿಪ್ ಅನ್ನು ಪಡೆದುಕೊಂಡಿದೆ. ಆದರೆ ದುರಂತವೆಂದರೆ ಬಾರಿಯೂ ವಿಜಯೋತ್ಸವ ಮುಗಿಸಿ ಬರುವಾಗ ಆರ್ಸಿಬಿ ಅಭಿಮಾನಿ ಒಬ್ಬ ಭೀಕರ ಅಪಘಾತದಲ್ಲಿ ಸಾವಿಗೀಡಾಗಿದ್ದಾನೆ.


ಆರ್ಸಿಬಿ (RCB) ಸತತ 2ನೇ ಬಾರಿಗೆ ಚಾಂಪಿಯನ್ ಪಟ್ಟ ಮುಡಿಗೇರಿಸಿಕೊಂಡಿದ್ದು, ಸಂಭ್ರಮಾಚರಣೆ ಮುಗಿಸಿ ಮನೆಗೆ ವಾಪಸ್ ಬರುತ್ತಿದ್ದ ಅಭಿಮಾನಿಯೊಬ್ಬ ಬೆಂಗಳೂರು ಉತ್ತರ (Bengaluru North) ತಾಲೂಕಿನ ಮಾದನಾಯಕನಹಳ್ಳಿ ಲಕ್ಷ್ಮೀಪುರ ಗ್ರಾಮದ ಬಳಿ 2 ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸಾವನ್ನಪ್ಪಿದ್ದಾನೆ.
ಮನೋಜ್ (21) ಮೃತ ಯುವಕ. ಘಟನೆಯಲ್ಲಿ ಓರ್ವ ಸಾವನ್ನಪ್ಪಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ. ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
