Home » Kalaburagi : ವಿವಿ ಘಟಿಕೋತ್ಸವದಲ್ಲಿ ಮಗನಿಗೆ 2 ಚಿನ್ನದ ಪದಕ – ಸಂಭ್ರಮ ನೋಡಲು ಬರುವಾಗಲೇ ಅಪಘಾತದಲ್ಲಿ ತಂದೆ ಸಾವು!!

Kalaburagi : ವಿವಿ ಘಟಿಕೋತ್ಸವದಲ್ಲಿ ಮಗನಿಗೆ 2 ಚಿನ್ನದ ಪದಕ – ಸಂಭ್ರಮ ನೋಡಲು ಬರುವಾಗಲೇ ಅಪಘಾತದಲ್ಲಿ ತಂದೆ ಸಾವು!!

0 comments

Kalaburagi : ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಮಗನಿಗೆ ಎರಡು ಚಿನ್ನದ ಪದಕಗಳು ದೊರಕಿದ್ದು, ಅದನ್ನು ಮಗ ಪಡೆಯುವ ಐತಿಹಾಸಿಕ ಕ್ಷಣವನ್ನು ಕಣ್ತುಂಬಿಕೊಳ್ಳಲು ಬಂದ ತಂದೆಯೊಬ್ಬರು ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ದಾರುಣ ಘಟನೆ ಕಲಬುರಗಿಯಲ್ಲಿ ನಡೆದಿದೆ.

ಮೃತರನ್ನು ಮಧ್ಯ ಪ್ರದೇಶದ ಉಜ್ಜಯಿನಿ ಮೂಲದ ಶಿವಕುಮಾರ್ ಶರ್ಮಾ (59) ಎಂದು ಗುರುತಿಸಲಾಗಿದೆ. ಶಿವಕುಮಾರ್ ಶರ್ಮಾ ಪುತ್ರ ದಿವ್ಯಾಂಶು ಸಕ್ಸೇನಾ ಕಲಬುರಗಿಯ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ (CUK) ಬಿ.ಟೆಕ್ (ಇ ಆಂಡ್ ಸಿ) ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದು, ಎರಡು ಚಿನ್ನದ ಪದಕಗಳಿಗೆ ಭಾಜನರಾಗಿದ್ದಾರೆ. ನಿನ್ನೆ (ಏಪ್ರಿಲ್ 22) ನಡೆದ ವಿಶ್ವವಿದ್ಯಾಲಯದ 10ನೇ ಘಟಿಕೋತ್ಸವದಲ್ಲಿ ದಿವ್ಯಾಂಶು ಚಿನ್ನದ ಪದಕಗಳನ್ನು ಸ್ವೀಕರಿಸಿದ್ದಾರೆ. 

ಮಗನ ಈ ಸಾಧನೆಯನ್ನು ನೋಡಲೆಂದೇ ತಂದೆ ಶಿವಕುಮಾರ್ ಅವರು ಮಧ್ಯಪ್ರದೇಶದಿಂದ ಕಲಬುರಗಿಗೆ ಆಗಮಿಸಿದ್ದರು. ಕಡಗಂಚಿ ಗ್ರಾಮದ ಬಳಿಯಿರುವ ವಿಶ್ವವಿದ್ಯಾಲಯದ ಕ್ಯಾಂಪಸ್‌ಗೆ ಶಿವಕುಮಾರ್ ಶರ್ಮಾ ಆಟೋದಲ್ಲಿ ತೆರಳುತ್ತಿದ್ದರು. ಈ ವೇಳೆ ಆಟೋ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಶಿವಕುಮಾರ್ ಶರ್ಮಾ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಆಟೋದಲ್ಲಿದ್ದ ಇತರರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಒಂದೆಡೆ ಮಗ ದಿವ್ಯಾಂಶು ವೇದಿಕೆಯ ಮೇಲೆ ಪದಕ ಸ್ವೀಕರಿಸಬೇಕಾದ ಸಂಭ್ರಮದಲ್ಲಿದ್ದರೆ, ಇನ್ನೊಂದೆಡೆ ಆತನನ್ನು ಸಲಹಿ ಬೆಳೆಸಿದ ತಂದೆಯ ಶವವಾಗಿ ಪಕ್ಕದ ಆಸ್ಪತ್ರೆಯಲ್ಲಿದ್ದರು ಎಂಬುದು ಎಂತವರ ಕಣ್ಣಲ್ಲೂ ನೀರು ತರಿಸುತ್ತೆ.

banner

You may also like